ಹುಬ್ಬಳ್ಳಿ-ಧಾರವಾಡ “ಗ್ಯಾರಂಟಿ ಸಮಿತಿ”ಗೆ ರಜತ ಉಳ್ಳಾಗಡ್ಡಿಮಠ ಅಧ್ಯಕ್ಷ- ಪ್ರೇಮನಾಥ ಚಿಕ್ಕತುಂಬಳ ಉಪಾಧ್ಯಕ್ಷರನ್ನಾಗಿಸಿ “ಸರಕಾರ” ಆದೇಶ
ಬೆಂಗಳೂರು: ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ನೂತನವಾಗಿ ಅಧ್ಯಕ್ಷ, ಉಪಾಧ್ಯಕ್ಷರನ್ನ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಯುವ ಮುಖಂಡ ರಜತ ಉಳ್ಳಾಗಡ್ಡಿಮಠ ಅವರನ್ನ ಅಧ್ಯಕ್ಷರನ್ನಾಗಿ ಪ್ರೇಮನಾಥ ಚಿಕ್ಕತುಂಬಳ ಅವರನ್ನ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶಿಸಲಾಗಿದೆ.

ಈ ಮೂಲಕ ಇಬ್ಬರು ಯುವ ನಾಯಕರಿಗೆ ಸಾರ್ವಜನಿಕ ಜೀವನದಲ್ಲಿ ಹೊಸ ಭರವಸೆ ಮೂಡಿದ್ದು, ಸಿಎಂ ಡಿ.ಕೆ.ಶಿವಕುಮಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
