Posts Slider

Karnataka Voice

Latest Kannada News

ನಾಳೆ ಒಂದೀನಾ ಹುಬ್ಬಳ್ಳಿ ಶಾಲೆಗಳಿಗೆ, ಇನ್ನುಳಿದಂತೆ ಧಾರವಾಡ-ಹುಬ್ಬಳ್ಳಿಯ “39” ಶಾಲೆಗಳಿಗೆ ’16’ರ ವರೆಗೆ “ಸೂಟಿ”…

Spread the love

ಧಾರವಾಡ: ರಾಷ್ಟ್ರೀಯ ಯುವ ಜನೋತ್ಸವದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು, ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದು, ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಪ್ರಧಾನಿ ನರೇಂದ್ರ ಮೋದಿಯವರು ಹುಬ್ಬಳ್ಳಿಗೆ ಆಗಮಿಸುತ್ತಿರುವ ನಾಳೆಗೆ ಹುಬ್ಬಳ್ಳಿಯ ಎಲ್ಲ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದು, ಒಂದೇ ದಿನಕ್ಕೆ ಸಿಮೀತ ಮಾಡಲಾಗಿದೆ.

ಇನ್ನುಳಿದ ಧಾರವಾಡ ಶಹರ, ತಾಲೂಕು ಹಾಗೂ ಹುಬ್ಬಳ್ಳಿಯ 39 ಶಾಲೆಗಳಿಗೆ ರಜೆಯನ್ನ ಘೋಷಣೆ ಮಾಡಲಾಗಿದ್ದು, ಈ ರಜೆಯು ಜನೇವರಿ 16 ರ ವರೆಗೆ ನೀಡಲಾಗಿದೆ. ಈ ಶಾಲೆಗೆ ಬರುವ ವಿದ್ಯಾರ್ಥಿಗಳು ಸಂಚರಿಸುವ ವಾಹನವನ್ನ ಪಡೆದಿರುವುದರಿಂದ ಇಂತಹ ನಿರ್ಣಯ ತೆಗೆದುಕೊಳ್ಳಲಾಗಿದೆ.

ಯಾವ್ಯಾವ ಶಾಲೆಗಳಿಗೆ ರಜೆ ನೀಡಲಾಗಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ…

*ನಾಳೆ ಒಂದು ದಿನ ಮಾತ್ರ ಹುಬ್ಬಳ್ಳಿ ನಗರದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ; ಪಿಯುಸಿ,ಪದವಿ ಕಾಲೇಜುಗಳಿಗೆ ರಜೆ ಇಲ್ಲ: ಡಿಸಿ ಗುರುದತ್ತ ಹೆಗಡೆ*

ಧಾರವಾಡ ( ಕ.ವಾ) ಜ. 11: ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮ ಹುಬ್ಬಳ್ಳಿ ನಗರದ ರೈಲ್ವೆ ಮೈದಾನದಲ್ಲಿ ಜರುಗುವದರಿಂದ ಮತ್ತು ಮಾನ್ಯ ಪ್ರಧಾನಮಂತ್ರಿಗಳು ಕಾರ್ಯಕ್ರಮ ಉದ್ಘಾಟನೆಗೆ ಆಗಮಸುತ್ತಿರುವದರಿಂದ ಜನದಟ್ಟಣೆ ಹೆಚ್ಚಾಗುತ್ತದೆ.

ಈ ಹಿನ್ನಲೆಯಲ್ಲಿ ಶಾಲಾ ಮಕ್ಕಳಿಗೆ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ ನಗರದ 1 ರಿಂದ 10 ನೇ ತರಗತಿ ವರೆಗಿನ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಳೆ ದಿನಾಂಕ- 12:01:2023 ರ ಗುರುವಾರದಂದು ಮಾತ್ರ ಒಂದು ದಿನ ರಜೆ ಘೋಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಯಾವುದೇ ರಜೆ ನೀಡಿರುವದಿಲ್ಲ, ಎಂದಿನಂತೆ ಪಿಯುಸಿ ಮತ್ತು ಡಿಗ್ರಿ ಕಾಲೇಜುಗಳ ತರಗತಿಗಳು ನಡೆಯುತ್ತವೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ


Spread the love

Leave a Reply

Your email address will not be published. Required fields are marked *