Posts Slider

Karnataka Voice

Latest Kannada News

ಹುಬ್ಬಳ್ಳಿ: 2ಸ್ಥಳ, 2ಕೊಲೆ- ಒಂದೇಡೆ ಮಹಿಳೆ, ಇನ್ನೊಂದೆಡೆ ಯುವಕನ ಕಗ್ಗೊಲೆ…

1 min read
Spread the love

ಹೆಂಡತಿಯನ್ನು ಕೊಡಲಿಯಿಂದ ಕೊಚ್ಚಿ ಭೀಕರ ಕೊಲೆ ಮಾಡಿ;ಠಾಣೆಗೆ ಶರಣಾದ ಗಂಡ

ಹುಬ್ಬಳ್ಳಿ : ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಗಂಡನೇ ಹೆಂಡತಿಯನ್ನು ಕೊಡಲಿಯಿಂದ ಬೀಕರವಾಗಿ ಕೊಲೆಗೈದು, ಪೋಲಿಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ಈಗಷ್ಟೇ ಹುಬ್ಬಳ್ಳಿಯಲ್ಲಿ ನಡೆದಿದೆ.

ಆನಂದ ನಗರದ ಘೋಡಕೆ ಪ್ಲಾಟ್’ನ ನಿವಾಸಿಯಾಗಿದ್ದ ಮಂಜುಳಾ ಮುತ್ತಳಿ ಎಂಬಾಕೆಯೇ ಕೊಲೆಯಾದ ದುರ್ದೈವಿಯಾಗಿದ್ದು, ಇಂದು ಬೆಳಿಗ್ಗೆ ಆಕೆಯ ಗಂಡ ಭೀಮಪ್ಪ ಹಣಕಾಸಿನ ವಿಚಾರಕ್ಕೆ ಜಗಳ ತೆಗೆದಿದ್ದಾನೆ. ಇದು ಅತಿರೇಕಕ್ಕೆ ಹೋಗುತ್ತಿದ್ದ ಹಾಗೇ ಮನೆಯಲ್ಲಿದ್ದ ಕೊಡಲಿಯಿಂದ ಮಂಜುಳಾಗೆ ಮನಬಂದಂತೆ ಹೊಡೆದ ಪರಿಣಾಮ ತೀವ್ರವಾದ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

ಕೊಲೆ ಮಾಡಿದ ತದನಂತರ ಆರೋಪಿ ಭೀಮಪ್ಪ ಹಳೇಹುಬ್ಬಳ್ಳಿ ಪೋಲಿಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಇನ್ನು ಘಟನೆ ಮಾಹಿತಿ ತಿಳಿಯುತ್ತಿದ್ದ ಹಾಗೇ ಕೊಲೆಯಾದ ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ, ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

….

ಹಳೇ ದ್ವೇಷ

ಹುಬ್ಬಳ್ಳಿ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಚಾಕು ಇರಿತಕ್ಕೊಳಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಖಾದರ್ ಭಾಷಾ ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾನೆ.

ಇಂದು ಸಾಯಂಕಾಲ 5 ಗಂಟೆಯ ಸುಮಾರಿಗೆ ಕಸಬಾಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಸಿದ್ದಿಕಿ ಕಲ್ಯಾಣ ಮಂಟಪದ ಮುಂಬಾಗದಲ್ಲಿ ನಿಂತಿದ್ದ ಖಾದರ್ ಭಾಷಾ ಮೇಲೆ ಆಟೋದಲ್ಲಿ ಬಂದಿದ್ದ ಆವೇಜ್ ಹಾಗೂ ಉಮರೇಜ್ ಸಹೋದರರು ಹಳೇ ದ್ವೇಷದ ಹಿನ್ನೆಲೆಯಲ್ಲಿ ಖಾದರ್ ಭಾಷಾ ಮೇಲೆ ಎಂಟಕ್ಕೂ ಹೆಚ್ಚು ಕಡೆಗಳಲ್ಲಿ ಚಾಕುವಿನಿಂದ ಇರಿದಿದ್ದರ ಪರಿಣಾಮ ಖಾದರ್ ಗಂಭೀರವಾಗಿ ಗಾಯಗೊಂಡಿದ್ದ.

ಆದ್ರೆ ದೇಹದ ಬಹಳ ಕಡೆಗಳಲ್ಲಿ ಚಾಕು ಇರಿತದ ಪರಿಣಾಮ ತೀವ್ರ ರಕ್ತ ಸಾವ್ರವಾಗಿ ಖಾದರ್ ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ನಲ್ಲಿ ಸಾವನಪ್ಪಿದ್ದಾನೆ, ಅಷ್ಟೇ ಅಲ್ಲದೆ ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಕಾನೂನು ಸುವ್ಯವಸ್ಥೆ ಡಿಸಿಪಿ ರಾಜೀವ ಎಂ ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಒಟ್ಟಿನಲ್ಲಿ ಕಳೆದ ಕೆಲವು ತಿಂಗಳುಗಳಿಂದ ಶಾಂತವಾಗಿದ್ದ ಹುಬ್ಬಳ್ಳಿಯಲ್ಲಿ ಮತ್ತೆ ಪುಡಿ ರೌಡಿಗಳು ಬಾಲ ಬಿಚ್ಚಿದ್ದು,ಇಂತಹ ಪುಡಿ ರೌಡಿಗಳ ಬಾಲವನ್ನು ಕಟ್ ಮಾಡುತ್ತಾರೋ ಇಲ್ಲವೋ ಎಂಬುದನ್ನು ಇದೀಗ ಕಾದು ನೋಡುವಂತಾಗಿದೆ.


Spread the love

Leave a Reply

Your email address will not be published. Required fields are marked *