Posts Slider

Karnataka Voice

Latest Kannada News

ಇಸ್ಮಾಯಿಲ್ ತಮಾಟಗಾರ “ಹತ್ಯೆ ಸಂಚು” ಮೂವರನ್ನ ಜೈಲಿಗಟ್ಟಿದ ಪೊಲೀಸರು…!!!

1 min read
Spread the love

ಧಾರವಾಡ: ಅಂಜುಮನ್ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ತಮಾಟಗಾರ ಹತ್ಯೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನ ಶಹರ ಠಾಣೆ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಯುವಕರ ಗುಂಪೊಂದು ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಾಕುವಿನಿಂದ ಓರ್ವನಿಗೆ ಇರಿಯುವ ಪ್ರಯತ್ನ ಮಾಡಿದ್ದಲ್ಲದೇ, ಅಂಜುಮನ್ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ತಮಾಟಗಾರ ಅವರ ಹತ್ಯೆ ಮಾಡುವ ಬೆದರಿಕೆಯೊಡ್ಡಿದ್ದರು.

ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿರುವ ಪೊಲೀಸರು ಮೂವರನ್ನ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇನ್ನೂ ಹಲವರ ವಿಚಾರಣೆ ನಡೆದಿದೆ ಎಂದು ಗೊತ್ತಾಗಿದೆ.

ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಅವರು ಸ್ವತಃ ತಾವೇ ಬಂದು ಸ್ಥಳ ಪರಿಶೀಲನೆ ನಡೆಸಿದ್ದರು. ಇನ್ಸಪೆಕ್ಟರ್ ನಾಗೇಶ ಕಾಡದೇವರಮಠ ಅವರು ಪ್ರಕರಣವನ್ನ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.


Spread the love

Leave a Reply

Your email address will not be published. Required fields are marked *