ಇಟಿಗಟ್ಟಿ ಬಳಿ “ಜೈ ಶ್ರೀರಾಮ” ಲಾರಿ ಡಿಕ್ಕಿ- ಸುಳ್ಳದ ಶಿವಾನಂದ ಕಂಕುಳಿ ದುರ್ಮರಣ…

ಧಾರವಾಡ: ನಗರದ ಹೊರವಲಯದಲ್ಲಿ ಲಾರಿಯೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಸ್ಥಳದಲ್ಲಿ ಸಾವಿಗೀಡಾದ ದುರ್ಘಟನೆ ಸಂಭವಿಸಿದೆ.
ಇಟಿಗಟ್ಟಿ ಗ್ರಾಮದ ಬಳಿ ಜೈ ಶ್ರೀರಾಮ ಹೆಸರಿನ ಲಾರಿಯೊಂದು ಡಿಕ್ಕಿ ಹೊಡೆದಿದ್ದರಿಂದ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದ 27 ವಯಸ್ಸಿನ ಶಿವಾನಂದ ಕಂಕುಳಿ ಎಂಬಾತ ಸಾವಿಗೀಡಾಗಿದ್ದಾನೆ.
ಘಟನೆಗೆ ಸಂಬಂಧಿಸಿದಂತೆ ಧಾರವಾಡ ಗ್ರಾಮೀಣ ಠಾಣೆ ಪಿಎಸ್ಐ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಲ್ಲದೇ, ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.