ಮಾಜಿ ಸಿಎಂ ಜಗದೀಶ ಶೆಟ್ಟರ ಮನೆ ಮುಂದೆ “ಶಿವಾಯ ನಮಃ ಓಂ”…!!!

ಹುಬ್ಬಳ್ಳಿ: ನಿರಂತರವಾಗಿ ಮಳೆ ಸುರಿಯುತ್ತಿದ್ದು, ಇದರಿಂದ ಕ್ಷೇತ್ರದ ಜನರು ಪರದಾಡುತ್ತಿದ್ದರೂ ಶಾಸಕರು ಅವರ ಅಹವಾಲು ಸ್ವೀಕರಿಸುತ್ತಿಲ್ಲ. ಹೀಗಾಗಿ ಆಕ್ರೋಶಗೊಂಡ ಸ್ಥಳೀಯರೊಂದಿಗೆ ಕಾಂಗ್ರೆಸ್ ಪ್ರತಿಭಟನೆಯನ್ನ ನಡೆಸುತ್ತಿದೆ.
ಬದಾಮಿನಗರದಲ್ಲಿರುವ ಮಾಜಿ ಸಿಎಂ ಜಗದೀಶ ಶೆಟ್ಟರ ಮನೆ ಮುಂದೆ ನಡೆಯುತ್ತಿರುವ ಹೋರಾಟದ ದೃಶ್ಯಾವಳಿಗಳು ಇಲ್ಲಿವೆ ನೋಡಿ..
ಕಳೆದ ಮೂವತ್ತು ವರ್ಷದಿಂದ ಕ್ಷೇತ್ರವನ್ನ ಪ್ರತಿನಿಧಿಸುತ್ತಿರುವ ಮಾಜಿ ಸಿಎಂ ಜಗದೀಶ ಶೆಟ್ಟರ ಅವರು, ಜನರ ಸಮಸ್ಯೆಗಳನ್ನ ಆಲಿಸುತ್ತಿಲ್ಲ. ಹೀಗಾಗಿ ಅನಿವಾರ್ಯವಾಗಿ ಹೋರಾಟ ಮಾಡಲಾಗುತ್ತಿದೆ ಎಂದು ರಜತ ಉಳ್ಳಾಗಡ್ಡಿಮಠ ಹೇಳಿದರು.