Posts Slider

Karnataka Voice

Latest Kannada News

ಹುಬ್ಬಳ್ಳಿಯ ಕಿಮ್ಸಗೆ ಶವ ಒಯ್ಯಲು ಬರುತ್ತಿದ್ದ ‘ಕ್ರೂಸರಗೆ ಸೀ ಬರ್ಡ್’ ಡಿಕ್ಕಿ: 2ಸಾವು, ಓರ್ವನ ಸ್ಥಿತಿ ಗಂಭೀರ…

1 min read
Spread the love

ಕಲಘಟಗಿ: ಹುಬ್ಬಳ್ಳಿಯ ಕಿಮ್ಸನಲ್ಲಿ ಸಾವಿಗೀಡಾದ ವ್ಯಕ್ತಿಯೋರ್ವನ ಶವ ತೆಗೆದುಕೊಂಡು ಬರಲು ಹೊರಟಿದ್ದ ಕ್ರೂಸರ್ ವಾಹನಕ್ಕೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಘಟನೆ ಕಲಘಟಗಿ ತಾಲೂಕಿನ ರಾಮನಾಳ ಕ್ರಾಸ್ ಬಳಿ ನಡೆದಿದ್ದು, ಸ್ಥಳದಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ.

ಹಳಿಯಾಳ ತಾಲೂಕಿನ ನಂದಿಗಟ್ಟ ಗ್ರಾಮದಿಂದ ಹೊರಟಿದ್ದ ಕ್ರೂಸರ್ ವಾಹನ, ರಾಮನಾಳ ಕ್ರಾಸ್ ಬಳಿ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ನಂದಿಗಟ್ಟದ ಶಿವನಗೌಡ ಪಾಟೀಲ, ಅಮೃತ ಪಾಟೀಲ ಸಾವಿಗೀಡಾಗಿದ್ದಾರೆ. ಚಾಲಕ ಮಾರುತಿ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು, ದೇವೆಂದ್ರ ಎಂಬಾತ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ರಭಸಕ್ಕೆ ಕ್ರೂಸರ್ ವಾಹನ ಎರಡು ತುಂಡಾಗಿದೆ.

https://fb.watch/f2GmIm8STS/

ಸ್ಥಳಕ್ಕೆ ಕಲಘಟಗಿ ಠಾಣೆ ಇನ್ಸಪೆಕ್ಟರ್ ಶ್ರೀಶೈಲ ಕೌಜಲಗಿ ಭೇಟಿ ನೀಡಿ, ಗಾಯಾಳುಗಳನ್ನ ಆಸ್ಪತ್ರೆಗೆ ರವಾನೆ ಮಾಡಿ ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.


Spread the love

Leave a Reply

Your email address will not be published. Required fields are marked *