ಕಲಘಟಗಿ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗೆ ದಿನಾಂಕ ನಿಗದಿ: ಜಿಲ್ಲಾಧಿಕಾರಿ ಆದೇಶ

ಧಾರವಾಡ: ನೂತನವಾಗಿ ಆಯ್ಕೆಯಾಗಿರುವ ಗ್ರಾಮ ಪಂಚಾಯತಿಗಳಿಗೆ ಈಗಾಗಲೇ ಮೀಸಲಾತಿಯೂ ನಿಗದಿಯಾಗಿದ್ದು, ಫೆಬ್ರುವರಿ 5ರೊಳಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಮಾಡಲು ಅಧಿಕಾರಿಗಳನ್ನ ನೇಮಕ ಮಾಡಿ ಧಾರವಾಡದ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಮೂವತ್ತು ತಿಂಗಳ ಮೊದಲ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರನ್ನ ನೇಮಕ ಮಾಡಬೇಕಾಗಿದ್ದು, ಇದಕ್ಕಾಗಿ ಈಗಾಗಲೇ ಮೀಸಲಾತಿಯನ್ನು ಮಾಡಲಾಗಿದ್ದು, ಆ ಪ್ರಕಾರ ನೇಮಕ ಮಾಡಿರುವ ಅಧಿಕಾರಿಗಳು, ಸದಸ್ಯರ ಸಭೆಯನ್ನ ಕರೆದು ಅಧ್ಯಕ್ಷ-ಉಪಾಧ್ಯಕ್ಷರನ್ನ ನೇಮಕ ಮಾಡುವಂತೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ನೀಡಿದ್ದಾರೆ.
ಕಲಘಟಗಿ ತಾಲೂಕಿನ 27 ಗ್ರಾಮ ಪಂಚಾಯತಿಗಳಿಗೆ ವಿವಿಧ ಇಲಾಖೆಗಳ ಅಧಿಕಾರಿಗಳನ್ನ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಮುಕ್ಕಲ ಗ್ರಾಮ ಪಂಚಾಯತಿಗೆ ಕಲಘಟಗಿ ಪಂಚಾಯತ್ ರಾಜ್ ಇಲಾಖೆಯ ಇಂಜಿನಿಯರ್ ಬಲರಾಮ ಚವ್ಹಾಣರನ್ನ ನೇಮಕ ಮಾಡಲಾಗಿದೆ.
ಬಮ್ಮಿಗಟ್ಟಿ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಮಂಜುನಾಥ ಮೇಟಿಯವರನ್ನ ಹಿರೇಹೊನ್ನಿಹಳ್ಳಿ ಗ್ರಾಮ ಪಂಚಾಯತಿಗೆ ನೇಮಕ ಮಾಡಲಾಗಿದೆ.