Posts Slider

Karnataka Voice

Latest Kannada News

ಕಂಬಾರಗಣವಿ ಸೇತುವೆಯ ಬಳಿ ಕೊಚ್ಚಿ ಹೋದ ಜಾನುವಾರುಗಳು…!

Spread the love

ಧಾರವಾಡ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಅಳ್ನಾವರ ತಾಲೂಕಿನ ಕಂಬಾರಗಣವಿ ಗ್ರಾಮದ ಸಮೀಪದಲ್ಲಿನ ಸೇತುವೆ ಮೇಲೆ ಬರುತ್ತಿದ್ದ ನಾಲ್ಕು ಜಾನುವಾರುಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ.

ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯಲ್ಲಿ ಜಾನುವಾರುಗಳು ಮನೆಗೆ ಬರುತ್ತಿದ್ದ ಸಮಯದಲ್ಲಿ ಘಟನೆ ನಡೆದಿದ್ದು, ಸುಮಾರು ಹೊತ್ತಿನವರೆಗೆ ಜಾನುವಾರುಗಳು ತಮ್ಮ ಜೀವ ಉಳಿಸಿಕೊಳ್ಳಲು ಪರದಾಡಿದ ದೃಶ್ಯಗಳನ್ನ ಸ್ಥಳೀಯರೊಬ್ಬರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.

ಜಾನುವಾರುಗಳು ಕಂಬಾರಗಣವಿ ಗ್ರಾಮದ ರೈತರದ್ದೆಂದು ಗೊತ್ತಾಗಿದ್ದು, ನೀರಿನಲ್ಲಿ ಕಾಣೆಯಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿಯನ್ನ ನೀಡಿದ್ದಾರೆಂದು ಗೊತ್ತಾಗಿದೆ.


Spread the love

Leave a Reply

Your email address will not be published. Required fields are marked *