Posts Slider

Karnataka Voice

Latest Kannada News

ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ನಿಶ್ಚಿತ: ಸಚಿವ ಸುರೇಶಕುಮಾರ

Spread the love

ಚಾಮರಾಜನಗರ: ಮೇ 12ರ ನಂತರ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಬಹುತೇಕ ನಿಶ್ಚಿತ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್‍ಕುಮಾರ್ ತಿಳಿಸಿದ್ದಾರೆ.

ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಮಾತನಾಡಿ, ರಾಜ್ಯದಲ್ಲಿ ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ಜನತಾ ಕರ್ಪ್ಯೂ ಜಾರಿಗೊಳಿಸಲಾಗಿದೆ. ಹೀಗಿದ್ದೂ ಸೋಂಕಿನ ನಿಯಂತ್ರಣ ಆಗ್ತಾ ಇಲ್ಲ. ಸೋಂಕಿನ ಪ್ರಕರಣ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇವೆ. ಮೇ 10ರಂದು ತಜ್ಞರ ಸಭೆ ನಡೆಯಲಿದೆ. ಸಿಎಂ ಯಡಿಯೂರಪ್ಪ ತಜ್ಞರೊಂದಿಗೆ ಸಭೆ ನಡೆಸಿ, ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು..

ಇದೇ ವೇಳೆ ಅವರು ಕಂಟ್ರೋಲ್ ಆಗದ ಸೋಂಕಿನ ಪ್ರಕರಣವನ್ನು ಸಂಪೂರ್ಣ ಲಾಕ್ ಡೌನ್ ಮಾಡುವ ಮೂಲಕ ನಿಯಂತ್ರಣ ಮಾಡೋ ನಿರ್ಧಾರವನ್ನು ಸರ್ಕಾರ ಕೈಗೊಳ್ಳುವ ಸಾಧ್ಯತೆ ಇದೆ. ಜನರು ಸೋಂಕು ತಡೆಗೆ ಜಾಗೃತರಾಗಿರಬೇಕು ಎಂದರು.

ಲಾಕ್ ಡೌನ್ ಮಾಡುವ ಮೂಲಕ ಕೊರೋನಾ ಪಾಸಿಟಿವ್ ಪ್ರಕರಣಗಳನ್ನ ಕಡಿಮೆ ಮಾಡುವ ಉದ್ದೇಶವನ್ನ ಹೊಂದಲಾಗಿದೆ. ಕಳೆದ ಬಾರಿ ಮಾಡಿದ ರೀತಿಯಲ್ಲಿ ಮಾಡುವ ನಿರ್ಧಾರ ತೆಗೆದುಕೊಳ್ಳಲಿದ್ದಾರೆಂದು ಹೇಳಲಾಗಿದೆ.


Spread the love

Leave a Reply

Your email address will not be published. Required fields are marked *