ದಿವಂಗತ ವಿಷ್ಣುವರ್ಧನ ಅವರಿಗೆ ಮರಣೋತ್ತರ “ಕರ್ನಾಟಕ ರತ್ನ” ಪ್ರಶಸ್ತಿ ನೀಡಲು ಹಿರಿಯ ನಟಿಯರ ಮನವಿ…

ಬೆಂಗಳೂರು: ಕನ್ನಡ ಚಲನಚಿತ್ರ ರಂಗದ ಹಿರಿಯ ನಟಿಯರಾದ ಜಯಮಾಲ, ಶ್ರತಿ ಮತ್ತು ಮಾಳವಿಕ ಅವಿನಾಶ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು.
ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರದ ನಾಮಕರಣ ಮಾಡುವಂತೆಯೂ ಮನವಿ ಮಾಡಿದರು.
ನಟ ವಿಷ್ಣುವರ್ಧನ್ ಅವರ ಸಿನೇಮಾ ಯಾನದ ಬಗ್ಗೆ ಅತೀವ ಆಸಕ್ತಿಯಿಂದ ಮಾತನಾಡಿದ ಮುಖ್ಯಮಂತ್ರಿಗಳು, ಶೀಘ್ರವೇ ಈ ಬಗ್ಗೆ ಚರ್ಚಿಸಲಾಗುವುದು ಎಂದರು.