Posts Slider

Karnataka Voice

Latest Kannada News

ಚಿನ್ನದನಾಡಲ್ಲಿ ಜಗದೀಶ ಶೆಟ್ಟರ ಮಿಂಚಿನ ಸಂಚಾರ: ಅಲ್ಲೆಂತಾ ಯೋಜನೆಗಳು ಜಾರಿಗೆ ಬರ್ತಿವೆ ಗೊತ್ತಾ..?

Spread the love

ಕೋಲಾರ: ಚೆನ್ನೈ-ಬೆಂಗಳೂರು ಇಂಡಸ್ಟ್ರೀಯಲ್‌ ಕಾರಿಡಾರ್‌ ನ ಕೇಂದ್ರಭಾಗದಲ್ಲಿರುವ ಕೋಲಾರ ಜಿಲ್ಲೆಯಲ್ಲಿ ಕೈಗಾರಿಕಾಭಿವೃದ್ದಿಗೆ ರಾಜ್ಯ ಸರಕಾರ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ ತಿಳಿಸಿದರು.

ಕೋಲಾರ ಜಿಲ್ಲೆಯ ಭಾರತ್‌ ಗೋಲ್ಡ್‌ ಮೈನ್ಸ್‌ ನ ಬಳಕೆ ಆಗದ 3200 ಎಕರೆ ಪ್ರದೇಶ, ಬಿಇಎಂಲ್‌ ನ ಗುತ್ತಿಗೆ ಮುಗಿದಿರುವ 973 ಎಕರೆ ಜಾಗದ ಸ್ಥಳ ಪರಿಶೀಲನೆ ನಡೆಸಿದರು. ನಂತರ ಡೆಕ್ಕನ್‌ ಹೈಡ್ರಾಲಿಕ್ಸ್‌ ಪ್ರೇ ಲಿಮಿಟೆಡ್‌ ಗೆ ಭೇಟಿ ನೀಡಿದ ನಂತರ ಶೆಟ್ಟರ ಮಾತನಾಡಿದರು.

ಕಳೆದ ಎರಡು ತಿಂಗಳಲ್ಲಿ ಕೋಲಾರ ಜಿಲ್ಲೆಗೆ ಎರಡನೇ ಬಾರಿ ಭೇಟಿ ನೀಡಿದ್ದೇನೆ. ನಿನ್ನೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕೇಂದ್ರದ ಗಣಿ ಸಚಿವರಾದ ಪ್ರಹ್ಲಾದ್‌ ಜೋಶಿ ಅವರೊಂದಿಗೆ ಸುಧೀರ್ಘವಾದ ಚರ್ಚೆಯನ್ನು ನಡೆಸಿದ್ದೇವೆ. ಈ ಸಂಧರ್ಭದಲ್ಲಿ ನಾವು ಭಾರತ್‌ ಗೋಲ್ಡ್‌ ಮೈನ್ಸ್‌ ಲಿಮಿಟೆಡ್‌ ಪ್ರದೇಶದಲ್ಲಿ ಸುಮಾರು 3200 ಎಕರೆ ಯಷ್ಟು ಜಾಗ ಬಳಕೆ ಆಗಿಲ್ಲ. ಈ ಜಾಗವನ್ನು ರಾಜ್ಯದ ಕೈಗಾರಿಕಾಭಿವೃದ್ದಿ ಪ್ರದೇಶದ ವತಿಯಿಂದ ಅಭಿವೃದ್ದಿ ಪಡಿಸುವ ಆಸಕ್ತಿಯನ್ನು ವ್ಯಕ್ತಪಡಿಸಿದ್ದೇವೆ. ಇದಕ್ಕೆ ಸರಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ಸಚಿವರು 6 ತಿಂಗಳ ಒಳಗಾಗಿ ಸರ್ವೇ ಕಾರ್ಯವನ್ನು ಮುಗಿಸಲು ಎಂಈಸಿಎಲ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದರು.

ಬೆಂಗಳೂರು ನಗರ ಪ್ರದೇಶದಲ್ಲಿ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಕೈಗಾರಿಕೆಗಳ ಒತ್ತಡ ಹೆಚ್ಚಾಗಿದೆ. ಇದಕ್ಕೆ ಸೂಕ್ತ ಪರ್ಯಾಯ ಜಿಲ್ಲೆ ಎಂದರೆ ಅದು ಕೋಲಾರ ಜಿಲ್ಲೆ. ಕೋಲಾರ ಜಿಲ್ಲೆಯಲ್ಲಿ ಸ್ಥಳೀಯವಾಗಿ ಉದ್ಯೋಗಾವಕಾಶ ಹೆಚ್ಚಿಸಲು ಹಾಗೂ ಬಂಡವಾಳ ಹೂಡಿಕೆಗೆ ಉತ್ತಮ ಅವಕಾಶ ದೊರೆತಂತಾಗುತ್ತದೆ. ಸರ್ವೇಯ ನಂತರ ಇಲ್ಲಿ ನಿರ್ಮಿಸಬೇಕಾದ ಕ್ಲಸ್ಟರ್‌ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಹೇಳಿದರು.

ಇದೇ ವೇಳೆ, ಬಿಇಎಂಎಲ್‌ ಗೆ ಗುತ್ತಿಗೆ ಆಧಾರದಲ್ಲಿ ನೀಡಲಾಗಿರುವ 973 ಎಕರೆ ಭೂಮಿಯ ಗುತ್ತಿಗೆ ಅವಧಿಯು ಮುಗಿದಿದ್ದು ಇದನ್ನು ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿಗೆ ಪಡೆದುಕೊಳ್ಳುವ ನಿಟ್ಟಿನಲ್ಲಿ ಚರ್ಚೆ ನಡೆಸಲು ಮುಂದಿನ ತಿಂಗಳು ಕೇಂದ್ರ ರಕ್ಷಣಾ ಸಚಿವರನ್ನು ಭೇಟಿಯಾಗುವುದಾಗಿ ತಿಳಿಸಿದರು.

ರಾಜ್ಯದ ನೂತನ ಕೈಗಾರಿಕಾ ನೀತಿಯಲ್ಲಿ ಎರಡನೇ ಹಾಗೂ ಮೂರನೇ ಹಂತದ ನಗರಗಳಲ್ಲಿ ಕೈಗಾರಿಕೆಗಳನ್ನು ಅಭಿವೃದ್ದಿ ಪಡಿಸಲು ಹೆಚ್ಚಿನ ಒತ್ತು ನೀಡಿದ್ದೇವೆ. ಅಲ್ಲದೇ ದೇಶದ ಬೇರೆ ಯಾವುದೇ ರಾಜ್ಯಗಳೂ ನೀಡದೇ ಇರುವಂತಹ ಅನುಕೂಲತೆಗಳನ್ನು ನಮ್ಮ ನೀತಿಯಲ್ಲಿ ನೀಡಿದ್ದು, ರಾಜ್ಯವನ್ನು ದೇಶಧ ನಂ1 ಕೈಗಾರಿಕಾ ಸ್ನೇಹೀ ರಾಜ್ಯ ಮಾಡುವುದು ನಮ್ಮ ಗುರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ಕೈಗಾರಿಕಾ ಅಭಿವೃದ್ಧಿ ಆಯುಕ್ತೆ ಗುಂಜನ್ ಕೃಷ್ಣ, ಲೋಕಸಭಾ ಸದಸ್ಯ ಎಸ್ ಮುನಿಸ್ವಾಮಿ, ಕೋಲಾರ ಜಿಲ್ಲಾಧಿಕಾರಿ, ಕೆಐಎಡಿಬಿ ಸಿಇಒ ಶಿವಶಂಕರ್, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ರೇವಣ್ಣ ಗೌಡ, ಶಾಸಕರು ಸೇರಿದಂತೆ ಹಲವರು ಉಪಸ್ಥಿತರಿದ್ದರು.


Spread the love

Leave a Reply

Your email address will not be published. Required fields are marked *