ಧಾರವಾಡ ಕವಿವಿ ಚುನಾವಣೆ: “ಸೋತದ್ದಕ್ಕೆ ಸೂಸೈಡ್”…!

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ನೌಕರರ ಸಹಕಾರಿ ಪತ್ತಿನ ಸಂಘ ನಿಯಮಿತದ ಚುನಾವಣೆಯಲ್ಲಿ ಸೋತಿದ್ದನ್ನೇ ಮನಸ್ಸಿಗೆ ಹಚ್ಚಿಕೊಂಡ ನೌಕರನೋರ್ವ ಧಾರವಾಡದ ರೇಣುಕಾನಗರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ದಶಕಗಳಿಂದ ಕೆಲಸ ಮಾಡುತ್ತಿರುವ ಚಂದ್ರಕಾಂತ ಸಾವಳಗಿ ಎಂಬುವವರೇ ಸಾವಿಗೆ ಶರಣಾಗಿದ್ದಾರೆ. ಎರಡು ದಿನಗಳ ಹಿಂದೆ ನಡೆದ ಚುನಾವಣೆಯಲ್ಲಿ ಸೋತಿದ್ದರು.
ಘಟನೆಗೆ ಸಂಬಂಧಿಸಿದಂತೆ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ.