Posts Slider

Karnataka Voice

Latest Kannada News

4 ಲಕ್ಷ ಬೇಡಿಕೆ, 2ಲಕ್ಷ ಪಡೆಯುವಾಗ “ಸಿಇಎನ್” ಎಸಿಪಿ, ಎಎಸ್ಐ ಲೋಕಾ ಬಲೆಗೆ…!!!

Spread the love

ಎರಡು ಲಕ್ಷ ರೂಪಾಯಿ ಲಂಚದ ಬೇಡಿಕೆ

ಬೆಂಗಳೂರು : ಸೈಬರ್ ಕ್ರೈಂ ಪ್ರಕರಣದ ತನಿಖೆ‌ ಕೈಗೊಳ್ಳಲು ಲಂಚ ಪಡೆಯುತ್ತಿದ್ದ ACP ಹಾಗೂ ASIರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. 2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಬೆಂಗಳೂರು ಈಶಾನ್ಯ ವಿಭಾಗದ CEN ಠಾಣೆಯ ಎಸಿಪಿ ತನ್ವೀರ್ ಹಾಗೂ ಎಎಸ್ಐ ಕೃಷ್ಣಮೂರ್ತಿ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್​​ಹ್ಯಾಂಡ್​ ಆಗಿ ಬಂಧಿಸಿದ್ದಾರೆ.

ಮಧುಸೂದನ್ ಬಿ.ಎಸ್. ಎಂಬವರ ಕಂಪನಿಯ ವೆಬ್‌ಸೈಟ್ ಹ್ಯಾಕ್ ಮಾಡಿ, ಆರ್ಥಿಕ‌ ನಷ್ಟವುಂಟು ಮಾಡಲಾಗಿತ್ತು. ಕೆಲಸದಿಂದ ತೆಗೆದು ಹಾಕಿದ ಸಿಟ್ಟಿಗೆ ಕಂಪನಿಯ ಮಾಜಿ ಉದ್ಯೋಗಿಯೊಬ್ಬನಿಂದ ಕೃತ್ಯ ನಡೆದಿದೆ ಎಂದು ಅನುಮಾನ ವ್ಯಕ್ತಪಡಿಸಿ, ಈಶಾನ್ಯ ವಿಭಾಗದ ಸಿಇಎನ್ ಠಾಣೆಗೆ ಮಧುಸೂಧನ್ ದೂರು ನೀಡಿದ್ದರು.

ಆದರೆ ಅನುಮಾನಿತ ಆರೋಪಿಯನ್ನು ವಿಚಾರಣೆ ನಡೆಸಿ ಪ್ರಕರಣದ ತನಿಖೆ ಕೈಗೊಳ್ಳಲು ಪ್ರತಿಯಾಗಿ ಎಸಿಪಿ ತನ್ವೀರ್ ಹಾಗೂ ಎಎಸ್ಐ ಕೃಷ್ಣಮೂರ್ತಿ 4 ಲಕ್ಷ ರೂ ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ಲೋಕಾಯುಕ್ತ ಪೊಲೀಸರಿಗೆ ಮಧುಸೂದನ್ ದೂರು ನೀಡಿದ್ದರು.

ದೂರಿನನ್ವಯ ಮಂಗಳವಾರ ಸಂಜೆ SP ಕೃಷ್ಣಮೂರ್ತಿ ನೇತೃತ್ವದಲ್ಲಿ ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡ ಲೋಕಾಯುಕ್ತ ಪೊಲೀಸರು, ಲಂಚ ಸ್ವೀಕರಿಸುತ್ತಿದ್ದ ಇಬ್ಬರೂ ಪೊಲೀಸ್​ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಹೆಚ್ಚಿನ ವಿಚಾರಣೆಗೊಳಪಡಿಸಲಾಗುತ್ತಿದೆ ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ.


Spread the love

Leave a Reply

Your email address will not be published. Required fields are marked *