ಗ್ಯಾಂಬ್ಲಿಂಗ್ ಪರ್ಮಿಷನ್: ತಡಸ ಪಿಎಸ್ಐ ಶರಣಬಸಪ್ಪ ಲೋಕಾಯುಕ್ತ ಬಲೆಗೆ…
1 min readಅಂದರ್-ಬಾಹರ್ ಪರವಾನಿಗೆಗೆ ಐದು ಲಕ್ಷ ರೂಪಾಯಿ ಡಿಮ್ಯಾಂಡ್..
ಹಾವೇರಿ: ಜಿಲ್ಲೆಯ ತಡಸ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಗ್ಯಾಂಬಲಿಂಗ್ಗೆ ಅನುಮತಿ ₹2 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಪಿಎಸ್ಐ ಮತ್ತು ಕಾನ್ಸ್ಟೇಬಲ್ ಬಿದ್ದಿದ್ದಾರೆ.
ತಡಸ ಪೊಲೀಸ್ ಠಾಣೆಯ ಪಿಎಸ್ಐ ಶರಣಬಸಪ್ಪ ಮತ್ತು ಕಾನ್ಸ್ಟೇಬಲ್ ಸುರೇಶ ಬಂಧಿತರು. ಜೂಜು ಆಡಿಸುವ ಸಂಬಂಧ ಪ್ರಭಾಕರ ಎನ್ನುವವರಿಂದ ₹5 ಲಕ್ಷ ಲಂಚದ ಬೇಡಿಕೆ ಇಟ್ಟಿದ್ದರು.
ಮಧ್ಯವರ್ತಿ ಕಿರಣ ವನಹಳ್ಳಿ ಮೂಲಕ ₹2 ಲಕ್ಷ ಮುಂಗಡ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ. ಹಾವೇರಿ ಲೋಕಾಯುಕ್ತ ಡಿವೈಎಸ್ಪಿ ಬಿ.ಪಿ.ಚಂದ್ರಶೇಖರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.