Posts Slider

Karnataka Voice

Latest Kannada News

ಹುಬ್ಬಳ್ಳಿಯ “ಲವ್ ಜಿಹಾದ್” ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ನಾವಿಬ್ಬರೂ ಮದುವೆ ಆಗುತ್ತಿದ್ದೇವೆ ಎಂದ ಯುವತಿ ವೀಡಿಯೋ ವೈರಲ್…!!!!

Spread the love

ಹುಬ್ಬಳ್ಳಿಯ ಕೇಶ್ವಾಪುರದ ನಿವಾಸಿಯಾಗಿರುವ ಯುವತಿಯೋರ್ವಳು ಮುಫೀಜ್ ಮಿಯಾನವರ ಎಂಬ ಯುವಕನ ವಿರುದ್ಧ ದೂರು ನೀಡಿದ್ದಳು. ತದನಂತರ ಅದನ್ನ ನಿರಾಕರಿಸಿ ವೀಡಿಯೋ ಹರಿಬಿಟ್ಡಿದ್ದಾರೆ. ಇಲ್ಲಿವೆ ನೋಡಿ ಎರಡು ವೀಡಿಯೋ…

ಮೊದಲ ವೀಡಿಯೋ…

ಎರಡನೇಯ ವೀಡಿಯೋ…

ಹುಬ್ಬಳ್ಳಿ: ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆಗಳಲ್ಲಿ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಬಿಜೆಪಿ ಹುಬ್ಬಳ್ಳಿಯಲ್ಲಿ ‘ನಕಲಿ ಲವ್ ಜಿಹಾದ್’ ಪ್ರಕರಣಗಳನ್ನು ಸೃಷ್ಟಿಸಿ, ಕೋಮು ಧ್ರುವೀಕರಣಕ್ಕೆ ಸಂಚು ರೂಪಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರಜತ ಉಳ್ಳಾಗಡ್ಡಿಮಠ ಗಂಭೀರ ಆರೋಪ ಮಾಡಿದ್ದಾರೆ.

​ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಹುಬ್ಬಳ್ಳಿಯ ಶಾಂತಿ ಮತ್ತು ಸಾಮರಸ್ಯವನ್ನು ಹಾಳು ಮಾಡಲು ಬಿಜೆಪಿ ವ್ಯವಸ್ಥಿತವಾಗಿ ‘ಟೂಲ್ ಕಿಟ್’ ಬಳಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

​”ವೈಯಕ್ತಿಕ ವಿಚಾರಗಳನ್ನು ಮತ್ತು ಕೌಟುಂಬಿಕ ಸಂಬಂಧಗಳನ್ನು ಕೋಮು ಬಣ್ಣ ಹಚ್ಚಿ ಬೃಹತ್ ಪ್ರತಿಭಟನೆಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ಈ ಬೆಳವಣಿಗೆಗಳ ಹಿಂದೆ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಮತ್ತು ಪ್ರಮೋದ್ ಮುತಾಲಿಕ್ ಅವರ ಪ್ರಚೋದನಾಕಾರಿ ನಡೆಗಳಿವೆ. ಸುಳ್ಳು ಆರೋಪಗಳನ್ನು ಹರಡುವ ಮೂಲಕ ಇವರು ನಗರದ ಸೌಹಾರ್ದತೆಯನ್ನು ನಾಶಮಾಡುತ್ತಿದ್ದಾರೆ,” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

​ನೆರೆಯ ಜಿಲ್ಲೆಗಳ ಉಪಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಹುಬ್ಬಳ್ಳಿಯಲ್ಲಿ ಅಶಾಂತಿಯ ವಾತಾವರಣ ನಿರ್ಮಿಸಲಾಗುತ್ತಿದೆ. ಜನಸಾಮಾನ್ಯರ ನೈಜ ಸಮಸ್ಯೆಗಳಾದ ಬೆಲೆ ಏರಿಕೆ, ನಿರುದ್ಯೋಗದಂತಹ ವಿಷಯಗಳಿಂದ ಗಮನ ಬೇರೆಡೆ ಸೆಳೆಯಲು ‘ನಕಲಿ ಲವ್ ಜಿಹಾದ್’ ಎಂಬ ಅಸ್ತ್ರವನ್ನು ಬಿಜೆಪಿ ಬಳಸುತ್ತಿದೆ ಎಂದು ರಜತ ದೂರಿದ್ದಾರೆ.

​ಕಾನೂನನ್ನು ಕೈಗೆತ್ತಿಕೊಳ್ಳುವವರು ಮತ್ತು ಜನರನ್ನು ಪ್ರಚೋದಿಸುವ ರಾಜಕೀಯ ನಾಯಕರ ವಿರುದ್ಧ ಜಿಲ್ಲಾಡಳಿತ ಹಾಗೂ ಪೊಲೀಸ್ ಆಯುಕ್ತರು ಕಠಿಣ ಕ್ರಮ ಕೈಗೊಳ್ಳಬೇಕು. ರಾಜಕೀಯ ಹಿತಾಸಕ್ತಿಗಾಗಿ ಹುಬ್ಬಳ್ಳಿಯ ನೆಮ್ಮದಿಯನ್ನು ಬಲಿ ಕೊಡಲು ಬಿಡುವುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.


Spread the love

Leave a Reply

Your email address will not be published. Required fields are marked *