Karnataka Voice

Latest Kannada News

ಧಾರವಾಡ: “ತನ್ನವಳು ಉಸಿರು ಚೆಲ್ಲಿದಳು” ಎಂದು ಗೊತ್ತಾದ “ಆತ ನೇಣಿಗೆ ಕೊರಳೊಡ್ಡಿದ”- ಪ್ರೇಮಿಗಳ ದುರಂತ ಅಂತ್ಯ…

Spread the love

ಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ಪ್ರಿಯಕರನೂ ಆತ್ಮಹತ್ಯೆ

ಧಾರವಾಡ: ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದ ಬೆನ್ನಲ್ಲೇ ಪ್ರಿಯಕರನೂ ಆತ್ಮಹತ್ಯೆಗೆ ಶರಣಾದ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡ ತಾಲೂಕಿನ ಕೊಟಬಾಗಿ ಗ್ರಾಮದ ತರುಣ್ ಸಾಗರ ಕುರಕುರಿ (21) ಆತ್ಮಹತ್ಯೆ ಮಾಡಿಕೊಂಡ ಯುವಕ. ಧಾರವಾಡ ನಗರದ ವಾಚ್ ಶಾಪ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ತರುಣ್, ನಗರದ ಪಿಜಿಯೊಂದರಲ್ಲಿ ಸ್ನೇಹಿತನ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ತರುಣ್‌ನ ಪ್ರೇಯಸಿ ಮೇಘಾ ಗುಬ್ಬನ್ನವರ (20) ಅವರು ನಿನ್ನೆ ಸಂಜೆ ಮನೆಯಲ್ಲಿ ಬೈದಿದ್ದರಿಂದ ಮನನೊಂದು ವಿಷದ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾಗಿದೆ. ಈ ವಿಷಯ ತಿಳಿದ ಬಳಿಕ ತರುಣ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.
ಘಟನೆ ಕುರಿತು ವಿದ್ಯಾಗಿರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಘಟನೆ ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.


Spread the love

Leave a Reply

Your email address will not be published. Required fields are marked *