Posts Slider

Karnataka Voice

Latest Kannada News

ಭ್ರಷ್ಟಾಚಾರ ಮಾಡಿದ್ರೇ ಉಗ್ರ ಕ್ರಮ: ಮೇಜರ್ ಸಿದ್ಧಲಿಂಗಯ್ಯ ಹಿರೇಮಠ

Spread the love

ಧಾರವಾಡ: ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಯಾವುದೇ ಹಂತದಲ್ಲಿ ಭ್ರಷ್ಟಾಚಾರಕ್ಕೆ ಯತ್ನಿಸಿದರೇ ಅಧಿಕಾರಿ ಹಾಗೂ ಸಿಬ್ಬಂದಿಯನ್ನದೆ ಉಗ್ರ ಕ್ರಮವನ್ನ ತೆಗೆದುಕೊಳ್ಳಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹೆಚ್ಚುವರಿ ಆಯುಕ್ತ ಮೇಜರ ಸಿದ್ಧಲಿಂಗಯ್ಯ ಹಿರೇಮಠ ಎಚ್ಚರಿಕೆ ನೀಡಿದ್ದಾರೆ.

ಶಿಕ್ಷಣ ಇಲಾಖೆಯಲ್ಲಿ ಸೇವೆಯಲ್ಲಿರುವಾಗಲೇ ನಿಧನ ಹೊಂದಿದ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದಲ್ಲಿ ಏಕಕಾಲಕ್ಕೆ 11 ಎಸ್ ಡಿಎ ಹಾಗೂ 21 ಡಿ-ದರ್ಜೆ ಹುದ್ದೆಗಳನ್ನ ನೇರ ನೇಮಕಾತಿ ಆದೇಶ ನೀಡಿದ ಸಮಯದಲ್ಲಿ ಹಿರೇಮಠ ಮಾತನಾಡುತ್ತಿದ್ದರು.

ಬೆಳಗಾವಿ ವಿಭಾಗದ 9 ಜಿಲ್ಲೆಗಳ ಡಿಡಿಪಿಐ ಕಚೇರಿಗಳು, ಡಯಟ್ ಗಳು ಹಾಗೂ ತಾಲೂಕಿನ ಬಿಇಓ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಯತ್ನಿಸಿ ಕಿರುಕುಳ ನೀಡಿದರೇ, ಅಂತವರ ವಿರುದ್ಧ ಕ್ರಮ ಜರುಗಿಸಲು ಹಿಂದೆ ಸರಿಯುವುದಿಲ್ಲವೆಂದು ಎಚ್ಚರಿಕೆ ನೀಡಿದರು.

ಇಲಾಖೆಯಲ್ಲಿ ಯಾರೇ ಹಣ ಕೇಳಿದರೂ ತಮಗೆ ನೇರವಾಗಿ ಸಂಪರ್ಕಿಸಿ ತಿಳಿಸುವಂತೆ ಮನವಿ ಮಾಡಿಕೊಂಡಿರುವ ಮೇಜರ್ ಸಿದ್ಧಲಿಂಗಯ್ಯ, ಭ್ರಷ್ಟಾಚಾರಕ್ಕೆ ಅವಕಾಶವಿಲ್ಲದಂತೆ ಪಾರದರ್ಶಕ ನೆಲೆಯಲ್ಲಿ ಸುಮಾರು 424 ಜನರಿಗೆ ಅನುಕಂಪದ ಆಧಾರದಲ್ಲಿ ಅವಲಂಬಿತರಿಗೆ ನೇರ ನೇಮಕಾತಿ ಮಾಡಲಾಗಿದೆ ಎಂದು ಹೇಳಿದರು.


Spread the love

Leave a Reply

Your email address will not be published. Required fields are marked *