Posts Slider

Karnataka Voice

Latest Kannada News

ಮಂಟೂರಲ್ಲಿ ಪೊಲೀಸರ ಸಮ್ಮುಖದಲ್ಲೇ ಮೀನಿನ ಸಂತೆ: ಜನಜಾತ್ರೆಗೆ ಪೊಲೀಸರ ಸಾಥ್…!

1 min read
Spread the love

ಹುಬ್ಬಳ್ಳಿ: ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾಡಳಿತ ಯಾವುದೇ ಥರದ ಮಾರುಕಟ್ಟೆಗೆ ಅವಕಾಶವನ್ನ ನೀಡಿಲ್ಲ. ಆದರೆ, ಮಂಟೂರಿನಲ್ಲಿ ಪೊಲೀಸರ ಸಮ್ಮುಖದಲ್ಲಿಯೇ ಮೀನು ಮಾರಾಟ ಭರ್ಜರಿಯಾಗಿ ನಡೆದಿದೆ.

ವೈರಲ್ ಆಗಿರುವ ವೀಡಿಯೋ..

ಲಾಕ್ ಡೌನ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮಾಂಸ ಮಾರಾಟವನ್ನೂ ಜಿಲ್ಲಾಡಳಿತ ಬಂದ್ ಮಾಡಿದೆ. ಕೇವಲ ಬೆಳಿಗ್ಗೆ 6 ಗಂಟೆಯಿಂದ 8 ಗಂಟೆಯವರೆಗೆ ತರಕಾರಿ ಮತ್ತು ಹಾಲು ಮಾರಾಟಕ್ಕೆ ಅವಕಾಶವನ್ನ ನೀಡಿದ್ದಾರೆ. ಆದರೆ, ಇದೇ ಸಮಯದಲ್ಲಿ ಪೊಲೀಸರ ಸಮ್ಮುಖದಲ್ಲಿಯೇ ಮೀನು ಸಂತೆಯನ್ನ ಮಾಡಿದ್ದು ಎಷ್ಟು ಸರಿ ಎಂದು ಗ್ರಾಮಸ್ಥರು ಪ್ರಶ್ನಿಸುತ್ತಿದ್ದಾರೆ.


Spread the love

Leave a Reply

Your email address will not be published. Required fields are marked *