Posts Slider

Karnataka Voice

Latest Kannada News

ಮಠ, ದರ್ಗಾ, ಚರ್ಚಗೆ ಭೇಟಿ ನೀಡಿ ಆಶೀರ್ವಾದ ಪಡೆದ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ…!!!

Spread the love

ಹುಬ್ಬಳ್ಳಿ:  ಅವಳಿನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ಮತ್ತು ಧಾರ್ಮಿಕ ಕೇಂದ್ರಗಳಿಗೆ ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತ N. ಶಶಿಕುಮಾರ್  ಅವರು ಭೇಟಿ ನೀಡಿದರು.

ಹುಬ್ಬಳ್ಳಿ ಧಾರವಾಡ ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಾದ ಕರ್ನಾಟಕ ವಿಶ್ವವಿದ್ಯಾಲಯದ ಉಪಕುಲಪತಿಗಳು (Karnataka University), ಧಾರವಾಡ SDM ವೈದ್ಯಕೀಯ ಮಹಾವಿದ್ಯಾಲಯದ ಮುಖ್ಯಸ್ಥರು, ಹುಬ್ಬಳ್ಳಿಯ KLE ಅಂಗಸಂಸ್ಥೆಯ B.V.B ಕಾಲೇಜಿನ ಪ್ರಾಂಶುಪಾಲರು, KIMS ವೈದ್ಯಕೀಯ ಸಂಸ್ಥೆಯ ಮುಖ್ಯಸ್ಥರುಗಳನ್ನು ಭೇಟಿ ಮಾಡಿ ಶಾಲಾ ಕಾಲೇಜುಗಳಲ್ಲಿ, ವಿದ್ಯಾರ್ಥಿಗಳ ಭದ್ರತೆ ಮತ್ತು ಸುರಕ್ಷತೆ ಬಗ್ಗೆ ಸಮಾಲೋಚನೆ ನಡೆಸಿ ಎಲ್ಲಾ ಶಾಲಾ ಕಾಲೇಜುಗಳ ಒಳ ಮತ್ತು ಹೊರಾಂಗಣಗಳಲ್ಲಿ ಸಿಸಿಟಿವಿ ಅಳವಡಿಕೆ ಕುರಿತು ಚರ್ಚಿಸಿದರು. ತುರ್ತು ಸಂದರ್ಭಗಳಲ್ಲಿ ಯಾವುದೇ ಸಹಾಯಕ್ಕಾಗಿ 112 ಸಹಾಯವಾಣಿ ಸಂಖ್ಯೆಗೆ ಕರೆ ಮಾಡುವಂತೆ ತಿಳಿಸಿದರು.

ಹುಬ್ಬಳ್ಳಿ ನಗರದ ಸಿದ್ಧಾರೂಢ ಮಠ, ಮೂರುಸಾವಿರಮಠ, ಫತೇಶಾ ಅಲಿ ದರ್ಗಾ, ಕೇಶ್ವಾಪುರ ಶಾಂತಿನಗರ ಚರ್ಚ್‌ಗಳಂತಹ ಧಾರ್ಮಿಕ ಕೇಂದ್ರಗಳಿಗೆ ಭೇಟಿ ಕೊಟ್ಟು ಆಶೀರ್ವಾದ ಪಡೆದು, ಧಾರ್ಮಿಕ ಕೇಂದ್ರಗಳ ಮುಖ್ಯಸ್ಥರುಗಳ ಜೊತೆಗೆ ಜಾತ್ರೆ ಸಮಯದಲ್ಲಿ ಮತ್ತು ಹೆಚ್ಚಿನ ಜನ ಸೇರುವಂತಹ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭಗಳಲ್ಲಿ, ಸಾರ್ವಜನಿಕರ ಸುರಕ್ಷತೆ ಮತ್ತು ಭದ್ರತೆಗಾಗಿ ಪೊಲೀಸ್ ನಿಯೋಜನೆ, ಬಂದೋಬಸ್ತ್, ಸೂಕ್ತ ಸಂಚಾರ ವ್ಯವಸ್ಥೆಗಳ ಬಗ್ಗೆ ಸಮಾಲೋಚನೆ ನಡೆಸಿದರು.


Spread the love

Leave a Reply

Your email address will not be published. Required fields are marked *