ದೇಶ ಕಾಪಾಡುತ್ತಲೇ ಶಾಶ್ವತ ನಿದ್ರೆಗೆ ಜಾರಿದ “ಗರಗ”ದ ಹೆಮ್ಮೆಯ ಯೋಧ- ಕಣ್ಣೀರಾಕಿದ ಮಾಜಿ ಶಾಸಕ ಅಮೃತ ದೇಸಾಯಿ..
ಧಾರವಾಡ: ದೇಶ ಕಾಯುವ ಪವಿತ್ರ ಕರ್ತವ್ಯದ ನಡುವೆಯೇ ಹೃದಯಾಘಾತದಿಂದ ನಿಧನರಾದ ಧಾರವಾಡ ತಾಲೂಕಿನ ಗರಗ ಗ್ರಾಮದ ಯೋಧ ವಸಂತರೆಡ್ಡಿ ರಾಮರೆಡ್ಡಿ ಕೆಂಡರೆಡ್ಡಿ (45) ಅವರ ಅಗಲಿಕೆ ಗ್ರಾಮದಲ್ಲಿ ದುಃಖದ ಛಾಯೆ ಮೂಡಿಸಿದೆ.
ಕಳೆದ 24 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ರಾಜಸ್ಥಾನದ ಬಾರ್ಮೇರ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿ ಕೊನೆಯುಸಿರೆಳೆದರು.
ಇಂದು ಮಾಜಿ ಶಾಸಕ ಅಮೃತ ದೇಸಾಯಿ ಅವರು ಮೃತ ಯೋಧನ ನಿವಾಸಕ್ಕೆ ಭೇಟಿ ನೀಡಿ, ತಾಯಿ ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ, ದುಃಖದಲ್ಲಿ ಭಾಗಿಯಾದರು. ದೇಶಕ್ಕಾಗಿ ಬದುಕು ಮುಡಿಪಾಗಿಟ್ಟ ಯೋಧನ ಸೇವೆ ಸದಾ ಸ್ಮರಣೀಯ ಎಂದು ಅವರು ಹೇಳಿದರು.
