Posts Slider

Karnataka Voice

Latest Kannada News

ಧಾರವಾಡ ಜಿಲ್ಲೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಸ್ತಿತ್ವದಲ್ಲಿದೆ… ಸಾಕ್ಷಿ ನೀಡಿದ ಅಧಿಕಾರಿಗಳು…!!!

Spread the love

ಗಣಿ ಮತ್ತು ಭೂವಿಜ್ಞಾನ ಇಲಾಖೆ ಅನಧಿಕೃತ ಮೊರಂ ಗಣಿಗಾರಿಕೆ ಮಾಡಿದ 2 ಟಿಪ್ಪರ್, 3 ಟ್ರ್ಯಾಕ್ಟರ್ ಜಪ್ತಿ

ಈ ಮೂಲಕ ಧಾರವಾಡ ಜಿಲ್ಲೆಯಲ್ಲಿ ಇಲಾಖೆ ಅಸ್ತಿತ್ವದಲ್ಲಿ ಇದೆ ಎಂಬುದನ್ನ ತೋರಿಸಿಕೊಟ್ಟಿದೆ

ಧಾರವಾಡ: ಧಾರವಾಡ ತಾಲೂಕಿನ ಸಲಕಿನಕೊಪ್ಪ ಹದ್ದಿನ ಸಣ್ಣ ಸೋಮಾಪುರ ಜಮೀನಿನಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅನುಮತಿ ಇಲ್ಲದೆ ಮೊರಂ ಗಣಿಗಾರಿಕೆ ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಮಹೇಶ ಗೌಡನಾಯ್ಕರ ನೇತೃತ್ವದಲ್ಲಿ ಸಿಬ್ಬಂದಿಯೊಂದಿಗೆ ಇಂದು (ಡಿ.26) ಸಂಜೆ ದಾಳಿ ನಡೆಸಲಾಗಿದೆ.

ಈ ವೇಳೆ ನಾಗೇಶ ಅಣ್ಣಿಗೇರಿ ಹಾಗೂ ಪವನಗೌಡ ಹೊಸೂರ ಎಂಬುವರು ಇಲಾಖೆಯ ಅನುಮತಿ ಇಲ್ಲದೆ ಮೊರಂ ಅಗೆದು ಸಾಗಾಟ ಮಾಡಿರುವುದು ಕಂಡುಬಂದಿತ್ತು. ಮೊರಂ ಸಾಗಿಸಲು ಬಳಸುತ್ತಿದ್ದ 2 ಟಿಪ್ಪರ್ ಹಾಗೂ 3 ಟ್ರ್ಯಾಕ್ಟರ್‍ಗಳನ್ನು ಜಪ್ತಿ ಮಾಡಿ ಗ್ರಾಮೀಣ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದೆ. ಮತ್ತು ಈ ಕುರಿತು ಭೂಮಾಲೀಕರಿಗೆ ನೋಟಿಸ್ ನೀಡಲಾಗಿದೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.


Spread the love

Leave a Reply

Your email address will not be published. Required fields are marked *