Posts Slider

Karnataka Voice

Latest Kannada News

ರಾಜಧಾನಿಯಲ್ಲಿ ಪ್ರಲ್ಹಾದ ಜೋಶಿ ಸಭೆ: ಅವಳಿನಗರ ರಸ್ತೆ ಸುಧಾರಿಸಲು ಕಟ್ಟುನಿಟ್ಟಿನ ಸೂಚನೆ

Spread the love

ಬೆಂಗಳೂರು: ಹುಬ್ಬಳ್ಳಿ-ಧಾರವಾಡ ರಸ್ತೆಗಳನ್ನ ಸುಧಾರಿಸುವ ಉದ್ದೇಶದಿಂದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಜ್ಯ ಸರಕಾರದ ಮಂತ್ರಿಗಳೊಂದಿಗೆ ಸಭೆ ನಡೆಸಿದರು.
ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪರಿಶೀಲನಾ ಸಭೆ ನಡೆಯಿತು. ಹುಬ್ಬಳ್ಳಿ-ಧಾರವಾಡಕ್ಕೆ ಸಂಬಂಧಿಸಿದ ರಸ್ತೆ ಕಾಮಗಾರಿಗಳ ಕುರಿತು ಮಾಹಿತಿ ಪಡೆದ ಸಚಿವ ಪ್ರಲ್ಹಾದ ಜೋಶಿ, ಕಾಮಗಾರಿಗಳನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ಜಗದೀಶ್ ಶೆಟ್ಟರ್, ನವಲಗುಂದ ಶಾಸಕ ಶಂಕರ ಪಾಟೀಲಮುನೇನಕೊಪ್ಪ, ಎನ್‌ಎಚ್‌ಎಐ, ಪಿಡಬ್ಲ್ಯೂಡಿಯ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

Leave a Reply

Your email address will not be published. Required fields are marked *