ಹುಬ್ಬಳ್ಳಿ ತಾರಿಹಾಳ ಅವಘಡ “ತನಿಖೆಗೆ ಸೂಚಿಸಿದ” ಸಚಿವ ಶಂಕರ ಪಾಟೀಲ ಮುನೇನಕೊಪ್ಪ…

ಹುಬ್ಬಳ್ಳಿ: ನಗರದ ಹೊರವಲಯದ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿನ ಪ್ಯಾಕ್ಟರಿಯೊಂದರಲ್ಲಿ ನಡೆದ ಅವಘಡಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ಮಾಡಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಿದ್ದಾಗಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.
ಗಾಯಾಳುಗಳನ್ನ ಕಿಮ್ಸನಲ್ಲಿ ಭೇಟಿ ಮಾಡಿದ ನಂತರ ಸಚಿವರು ಮಾಧ್ಯಮದವರೊಂದಿಗೆ ಮಾತನಾಡಿದರು.
ತಾರಿಹಾಳದಲ್ಲಿ ನಡೆದಿರುವ ಘಟನೆಯ ಬಗ್ಗೆ ಖೇದ ವ್ಯಕ್ತಪಡಿಸಿದ ಸಚಿವರು, ಗಾಯಾಳುಗಳಿಗೆ ಸಂಪೂರ್ಣ ಚಿಕಿತ್ಸೆ ನೀಡಲು ಸರಕಾರ ಬದ್ಧವಿದೆ ಎಂದರು.
ಇದೇ ಸಮಯದಲ್ಲಿ ಹುಬ್ಬಳ್ಳಿಯ ವಿದ್ಯಾನಗರದ ಪ್ಯಾಕ್ಟರಿಯಲ್ಲಿ ನಡೆದಿದ್ದ ಸ್ಪೋಟಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗದಿರುವ ಬಗ್ಗೆಯೂ ವಿಚಾರಣೆ ನಡೆಸಲು ಪೊಲೀಸ್ ಕಮೀಷನರ್ ಗೆ ಹೇಳಲಾಗುವುದೆಂದರು.