Karnataka Voice

Latest Kannada News

ಜೂನ್ 7ರ ನಂತರ ಲಾಕ್ ಡೌನ್ ಬೇಡಾ: ಸಚಿವ ಸೋಮಶೇಖರ ಹೇಳಿಕೆ..

ಮೈಸೂರು: ಈಗಾಗಲೇ ಕಳೆದ ಎರಡು ತಿಂಗಳಿಂದ ಲಾಕ್ ಡೌನ್ ಆಗಿದೆ. ದಿನಗೂಲಿ ಮಾಡುವವರ ಜೀವನ ಸಂಕಷ್ಟದಲ್ಲಿದೆ. ಹೀಗಾಗಿ, ಜೂನ್ 7 ರ ನಂತರ ಲಾಕ್ ಡೌನ್ ಮಾಡುವುದು ಬೇಡವೆಂದು ಸಚಿವ ಎಸ್.ಟಿ.ಸೋಮಶೇಖರ ಹೇಳಿದರು.

ನಗರದಲ್ಲಿ ಮಾತನಾಡಿದ ಸಚಿವ ಸೋಮಶೇಖರ ಅವರು, ಜೂನ್ 7 ರ ನಂತರ ಲಾಕ್ ಡೌನ್ ಬೇಡ. ಈಗಾಗಲೇ ಎರಡು ತಿಂಗಳಿಂದ ಲಾಕ್ ಡೌನ್ ಆಗಿದೆ. ದಿನ ಕೂಲಿ ಮಾಡಿ ಜೀವನ ಮಾಡುವವರ ಜೀವನ ಈಗಲೇ ಕಷ್ಟವಾಗಿದೆ. ಮತ್ತೆ ಲಾಕ್ ಡೌನ್ ಮುಂದುವರೆಸಿದರೆ ಕಷ್ಟವಾಗುತ್ತೆ ಎಂದು ಹೇಳಿದರು.

ಸಿಎಂ ಅಭಿಪ್ರಾಯ ಕೇಳಿದರೆ ಇದೆ ಅಭಿಪ್ರಾಯವನ್ನು ತಿಳಿಸುತ್ತೇನೆ ನಾನು ತಿಳಿಸುತ್ತೇನೆ. ಈಗಾಗಲೇ ಕೊರೋನಾ ಪ್ರಕರಣ ಇಳಿಮುಖವಾಗುತ್ತಿದೆ. ಇದರಿಂದ ಲಾಕ್ ಡೌನ್ ಮುಂದುವರೆಸುವುದು ಬೇಡ. ಮನೆ ಮನೆ ಸರ್ವೇ ಕಾರ್ಯದ ಬಗ್ಗೆ ರಿವಿವ್ಯೂ ಮಾಡಲಾಗಿದೆ ಎಂದು ಸಚಿವರು ಹೇಳಿದರು.

Leave a Reply

Your email address will not be published. Required fields are marked *