Posts Slider

Karnataka Voice

Latest Kannada News

ಕಮಲಕ್ಕೆ ಹಾರಿದ 15 ಶಾಸಕರಿಗೆ ಬಿಜೆಪಿ ರಾಜಕೀಯ ಸಮಾಧಿ…!

Spread the love

ಬೆಂಗಳೂರು: ಯುವತಿ ಜೊತೆಗಿನ ರಾಸಲೀಲೆ ಸಿಡಿ ಬಿಡುಗಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ಬೆನ್ನಲ್ಲೇ ಬಿಜೆಪಿಗೆ ಜಿಗಿದ 15 ಶಾಸಕರ ಬಗ್ಗೆ ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿ, ಬಿಜೆಪಿಗೆ ಹೋದ 15 ಜನರನ್ನ ಬಿಜೆಪಿ ಮುಗಿಸುತ್ತದೆ ಎಂದು ಹೇಳಿದೆ.

ಆಪರೇಷನ್‌ಗೊಳಪಟ್ಟು ಜಿಗಿದ ‘ಜಂಪಿಂಗ್ ಸ್ಟಾರ್ಸ್ಗ’ಳಿಗೆ ಕರ್ನಾಟಕದ ಭಾರತೀಯ ಜನತಾ ಪಕ್ಷವು ರಾಜಕೀಯ ಸಮಾಧಿ ತೊಡುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಅಂದೇ ಸದನದಲ್ಲಿ ಗಂಟಾಘೋಷವಾಗಿ ಭವಿಷ್ಯ ನುಡಿದಿದ್ದರು’ ಎಂದು ಕಾಂಗ್ರೆಸ್ ತನ್ನ ಟ್ವೀಟ್ ನಲ್ಲಿ ಉಲ್ಲೇಖಿಸಿದೆ.

ಕಾಂಗ್ರೆಸ್ ನಿಂದ ಬಿಜೆಪಿಗೆ ಜಿಗಿದ 15 ಮಂದಿ ಶಾಸಕರ ಪೈಕಿ ಒಬ್ಬೊಬ್ಬರನ್ನೇ ಮುಗಿಸುವುದಕ್ಕೆ ಹೊರಟಿದೆ. ‘ಇಂದು ಅದರಂತೆಯೇ ಹೆಚ್.ವಿಶ್ವನಾಥ್, ರಮೇಶ್ ಜಾರಕಿಹೊಳಿ… ಒಬ್ಬೊಬ್ಬರನ್ನಾಗಿಯೇ ಒಂದೊಂದು ರೀತಿಯಲ್ಲಿ ಮುಗಿಸುತ್ತಿದೆ ಬಿಜೆಪಿ’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅಂದು ಹೇಳಿದ್ದೇನು?: ‘ಒಬ್ಬ ಬಂದು ನಂಗೆ ಪವರ್ ಸಿಗುತ, ಅವನ್ಯಾರೋ ಒಬ್ಬ ಹೇಳ್ತಾನೆ ನಂಗೆ ಡೆಪ್ಯೂಟಿ ಸಿಎಂ, ನನಗೆ ಜಲಸಂಪನ್ಮೂಲ, ಇನ್ನೊಬ್ರಿಗೆ ಪವರ್ ಅಂತೆ, ಇನ್ನೊಬ್ಬರಿಗೆ ಗೃಹ ಖಾತೆಯಂತೆ. ನಾನ್ ಹೇಳಿದೆ ಲೇ.. ಎಲ್ಲೋ ಹಾಕತೌರೆ ಕಣೋ ಟೋಪಿ ನಿಮ್ಗೆ 15 ಜನಕ್ಕೂ.. ನಿಮ್ 15 ಜನಕ್ಕೂ ಸಮಾಧಿ ಮಾಡ್ತಾರೆ. ರಾಜಕೀಯದ ಸಮಾಧಿ. ಹಾ ರಾಜಕೀಯವಾಗಿ ಸಮಾಧಿ ಮಾಡುತ್ತಿದ್ದಾರೆ ಇಂಥ ಮಾತಿಗೆಲ್ಲ ಬೀಳುವುದಕ್ಕೆ ಹೋಗಬೇಡಿ ಕಣ್ರೋ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿರುವ ವೀಡಿಯೋವನ್ನು ಟ್ವೀಟ್ ಮಾಡಲಾಗಿದೆ.


Spread the love

Leave a Reply

Your email address will not be published. Required fields are marked *