Posts Slider

Karnataka Voice

Latest Kannada News

ಬೆಳ್ಳಂಬೆಳಿಗ್ಗೆ ಬೆಳಗಾವಿಯಲ್ಲಿ ಶಂಕರ ಪಾಟೀಲಮುನೇನಕೊಪ್ಪ..!

1 min read
Spread the love

ಬೆಳಗಾವಿಯ ಅಭಿವೃದ್ಧಿಗಾಗಿ ನಡೆದ ಸಭೆಯ ಮುನ್ನ ಶಂಕರ ಪಾಟೀಲಮುನೇನಕೊಪ್ಪ, ಸಚಿವ ಶಾಸಕರೊಂದಿಗೆ ಡಾ.ಬಿ.ಆರ್.ಅಂಬೇಡ್ಕರ ಅವರಿಗೆ ಗೌರವ ನಮನ ಸಲ್ಲಿಸಿದರು.

ಬೆಳಗಾವಿ: ಧಾರವಾಡ ಜಿಲ್ಲೆಯ ನವಲಗುಂದ ಶಾಸಕರು ಆಗಿರುವ ಕರ್ನಾಟಕ ನಗರ ಮೂಲಭೂತ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಅಧ್ಯಕ್ಷ ಇಂದು ಬೆಳ್ಳಂಬೆಳಿಗ್ಗೆ ಬೆಳಗಾವಿಯ ನಗರದ ಅಭಿವೃದ್ಧಿಗಾಗಿ ನಡೆಯುತ್ತಿರುವ ಮಹತ್ವದ ಸಭೆಯಲ್ಲಿ ಭಾಗವಹಿಸಿದ್ದರು.

ಬೆಳಗಾವಿಯ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ನಡೆದ ಬೆಳಗಾವಿ ಮಹಾನಗರ ಪಾಲಿಕೆ, ಸ್ಮಾರ್ಟ್ ಸಿಟಿ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರಗಳ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಬೈರತಿ ಬಸವರಾಜ ಹಾಗೂ ಸ್ಥಳೀಯ ಶಾಸಕರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದ ಸಭೆಯಲ್ಲಿ ಹಾಜರಾಗಿದ್ದರು.

ನಿಗಮದ ಅಧ್ಯಕ್ಷರಾದ ನಂತರ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿರುವ ಶಂಕರ ಪಾಟೀಲಮುನೇನಕೊಪ್ಪ ಅವರು, ಉತ್ತರ ಕರ್ನಾಟಕದ ಪ್ರಮುಖ ನಗರಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ. ಈ ಭಾಗದಲ್ಲಿ ಅಭಿವೃದ್ಧಿ ಆಗುತ್ತಿಲ್ಲವೆಂಬ ಆಗಾಗ ಕೇಳಿ ಬರುತ್ತಿರುವುದನ್ನ, ನಿಲ್ಲಿಸುವುದೇ ಮುನೇನಕೊಪ್ಪ ಉದ್ದೇಶವಾಗಿದೆ.

ತಮ್ಮದೇ ಇಲಾಖೆಯಿಂದ ನಡೆಯುವ ಮಹತ್ವದ ಕಾರ್ಯಗಳಿಗೆ ಸಚಿವರೊಂದಿಗೆ ಕೂಡಿಕೊಂಡು ಮುನ್ನಡೆಯುತ್ತಿರುವ ನಿಗಮದ ಅಧ್ಯಕ್ಷ ಶಂಕರ ಪಾಟೀಲಮುನೇನಕೊಪ್ಪ ಕಾರ್ಯ ಪ್ರತಿ ಜಿಲ್ಲೆಯಲ್ಲೂ ಮಹತ್ವ ಪಡೆದುಕೊಳ್ಳುತ್ತಿದೆ.


Spread the love

Leave a Reply

Your email address will not be published. Required fields are marked *

You may have missed