Posts Slider

Karnataka Voice

Latest Kannada News

‘MLA’ ಆಗಲು ಹೊರಟಿದ್ದ ‘PDO’ಗೆ- ಕೋಟಿಯ “ಹಾಲಶ್ರೀ”ಯ ನಾಮವಂತೆ…!!!

1 min read
Spread the love

ಪಿಡಿಓ ಆಗಿದ್ದವನು ಶಾಸಕನಾಗುವ ಉಮೇದಿಯಲ್ಲಿದ್ದ

ಟಿಕೆಟ್‌ಗಾಗಿ ಒಂದು ಕೋಟಿ ರೂಪಾಯಿ ಕೊಟ್ಟಿದ್ನಂತೆ

ಗದಗ: ಉಡುಪಿ ಜಿಲ್ಲೆಯಲ್ಲಿ ಕಾಸಿಗಾಗಿ ಟಿಕೆಟ್​​ ಲಾಲಸೆ ತೋರಿ ಉದ್ಯಮಿಯಿಂದ ಐದು ಕೋಟಿ ಪೀಕಿರುವ ಮಿಸ್​​ ಚೈತ್ರಾ ಕುಂದಾಪುರ ಟೀಮ್​ ವಂಚನೆ ಹೊರಬೀಳುತ್ತಿದ್ದಂತೆ ಅದೇ ತಂಡದಲ್ಲಿದ್ದ ಅಭಿನವ ಹಾಲಶ್ರೀ ಸ್ವಾಮೀಜಿ, ತನ್ನದೇ ಪ್ರತ್ಯೇಕ ಪ್ರಯತ್ನದಲ್ಲಿ ಮತ್ತೊಬ್ಬ ಮಿಕಕ್ಕೆ ಗಾಳ ಹಾಕಿ 1 ಕೋಟಿ ರೂಪಾಯಿ ವಂಚಿಸಿರುವ ಬಗ್ಗೆ ಆರೋಪ ಕೇಳಿಬಂದಿದೆ.

ಎಸ್.ಸಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸುವ ಆಸಕ್ತಿ ಹೊಂದಿದ್ದ ಶಿರಹಟ್ಟಿ ತಾಲೂಕಿನ ರಣತೂರು ಗ್ರಾಮ ಪಂಚಾಯ್ತಿ ಪಿಡಿಓ ಸಂಜಯ್ ಚವಡಾಳ ಎಂಬಾತ ಇದೀಗ ಹಾಲಶ್ರೀ ವಿರುದ್ಧ ವಂಚನೆ ಆರೋಪ ಹೊರಿಸಿ, ಮುಂಡರಗಿ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದಾರೆ. ಅರುಂಧತಿ ಫೌಂಡೇಷನ್ ಹೆಸರಲ್ಲಿ ಸಾಮಾಜಿಕ‌ ಸೇವೆಯಲ್ಲಿ ತೊಡಗಿರುವ ಸಂಜಯ್ ಚವಡಾಳ, ಶಿರಹಟ್ಟಿ ತಾಲೂಕಿನ ಹೆಬ್ಬಾಳ ಗ್ರಾಮದವರು.

ಸಂಪೂರ್ಣ ವೀಡಿಯೋ…

ಕರ್ತವ್ಯಲೋಪದ ಆರೋಪದಲ್ಲಿ ಸಂಜಯ ಸದ್ಯ ಅಮಾನತುಗೊಂಡಿದ್ದಾರೆ. ಶಿರಹಟ್ಟಿ ಮೀಸಲು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಂದು ಬಿಂಬಿಸಿಕೊಂಡಿದ್ದ ಸಂಜಯ್, ಚುನಾವಣೆಗೆ ಮುಂಚಿತವಾಗಿ 1 ಕೋಟಿ ರೂಪಾಯಿ ಹಣವನ್ನ ಶ್ರೀಗಳಿಗೆ ನೀಡಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸೆಪ್ಟೆಂಬರ್ 19 ನೇ ತಾರೀಕು ಮಧ್ಯರಾತ್ರಿ ಠಾಣೆಗೆ ಬಂದು ಸಂಜಯ್ ದೂರು ನೀಡಿದ್ದಾರೆ.


Spread the love

Leave a Reply

Your email address will not be published. Required fields are marked *