Posts Slider

Karnataka Voice

Latest Kannada News

ಜಗದೀಶ ಶೆಟ್ಟರ್ “ತಾಕತ್” ಬಗ್ಗೆ Mla ಟೆಂಗಿನಕಾಯಿ ಮಾತಾಡುತ್ತಿದ್ದಾಗ, ‘ನಸುನಗುತ್ತಿದ್ದ’ ಸಂತೋಷ ಚವ್ಹಾಣ…

Spread the love

ಹುಬ್ಬಳ್ಳಿ: ಬಿಜೆಪಿಯಲ್ಲಿ ಟಿಕೆಟ್ ಮಾರಾಟ ಪದ್ದತಿಯಿಲ್ಲ. ಕೆಲವರು ತಮ್ಮ ಚಟಕ್ಕೆ ಮಾಡಿದ್ರೆ ಅದಕ್ಕೆ ಬಿಜೆಪಿ ಉತ್ತರ ನೀಡುವುದಿಲ್ಲ. ಇದಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಶಾಸಕರು, ಮಾಜಿ ಸಿಎಂ ಹೇಗೆ ಟಿಕೆಟ್ ತೆಗೆದುಕೊಂಡಿದ್ದರು. ತಾವು, ಹೇಗೆ ಟಿಕೆಟ್ ಕೊಟ್ಟಿದ್ದರು ಅಂತ ಎಲ್ಲಾ ಗೊತ್ತಿದೆ. ಅತೀ ಹೆಚ್ಚು ಲಿಂಗಾಯತ ಸಮುದಾಯದ ಸಿಎಂ ಕೊಟ್ಟಿದ್ದು ಬಿಜೆಪಿ. ಶೆಟ್ಟರ್ ಗೆ 30 ವರ್ಷ ಬಿಜೆಪಿ ಎಲ್ಲಾ ಕೊಟ್ಟಿದೆ. ನಿಮಗೆ ಅನ್ಯಾಯವಾಗಿದ್ರೆ ನಿಮಗೆ ತಾಕತ್ ಇದ್ದರೆ ನೀವು ಸರಿಮಾಡಿಕೊಳ್ಳಿ ಎಂದು ಕುಟುಕಿದರು.

ಈ ಸಮಯದಲ್ಲಿ ಪಾಲಿಕೆ ಸದಸ್ಯ ಸಂತೋಷ ಚವ್ಹಾಣ ನಸುನಗುತ್ತಿದ್ದರು. ವೀಡಿಯೋ ಇಲ್ಲಿದೆ ನೋಡಿ..

ರಾಜಕೀಯದಲ್ಲಿ ಸಮುದಾಯವನ್ನ ಎಳೆದು ತರಬಾರದು. ರಾಜಕೀಯಕ್ಕೂ ಸಮಾಜಕ್ಕೂ ಸಂಬಂಧವಿಲ್ಲ. ಕಾಂಗ್ರೆಸ್ ನಲ್ಲಿ ಯಾರು ಶೆಟ್ಟರನ್ನು ಗುರುತಿಸುತ್ತಿಲ್ಲ. ಇದರಿಂದಾಗಿ ಅವರಿಗೆ ಕಷ್ಟ ಆಗಿದೆ. ಹೀಗಾಗಿ ಅವರು ಮಾಧ್ಯಮಗಳಿಗೆ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಶಾಸಕ ಟೆಂಗಿನಕಾಯಿ ಹೇಳಿದರು.


Spread the love

Leave a Reply

Your email address will not be published. Required fields are marked *