ತಾಯಿ-ಮಡದಿಯನ್ನ ನೋಡಿಕೊಳ್ಳುತ್ತಿದ್ದ ಮಗ “ಈರಣ್ಣ” 500 ರೂ.ಗಾಗಿ ಹತ್ಯೆ- ಹುಬ್ಬಳ್ಳಿಯನ್ನ ಬೆಚ್ಚಿಬೀಳಿಸಿದ ಘಟನೆ…
ತಾಯಿ ವಿಜಯಲಕ್ಷ್ಮಿ ಮಡದಿ ಭಾಗ್ಯಶ್ರೀ ಇಬ್ಬರಿಗೂ ಘಟನೆಯ ಬಗ್ಗೆ ಮಾಹಿತಿಯೇ ಇಲ್ಲ. ಈ ಇಬ್ಬರನ್ನೂ ಕೊನೆಯುಸಿರೆಳೆದ ಈರಣ್ಣ ನೋಡಿಕೊಳ್ಳುತ್ತಿದ್ದನಂತೆ
ಹುಬ್ಬಳ್ಳಿ: ಕೇವಲ ₹500 ಸಾಲದ ಹಣದ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಆಟೋ ಚಾಲಕರೊಬ್ಬರನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ನಗರದ ಯಲ್ಲಾಪುರ ಓಣಿಯ ನಿವಾಸಿ, ಆಟೋ ಚಾಲಕ ಈರಣ್ಣ ಹುರಕಡ್ಲಿ (45) ಕೊಲೆಯಾದ ದುರ್ದೈವಿಯಾಗಿದ್ದಾನೆ. ಮೃತ ಈರಣ್ಣ ಅವರು ಆರೋಪಿ ಶಶಿಧರ್ ಎಂಬಾತನಿಂದ ₹500 ಸಾಲ ಪಡೆದಿದ್ದರು ಎನ್ನಲಾಗಿದೆ. ಜೂನ್ 25ರಂದು ಈ ಹಣದ ವಿಚಾರವಾಗಿ ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ಆಕ್ರೋಶಗೊಂಡ ಶಶಿಧರ್ ಕಲ್ಲಿನಿಂದ ಈರಣ್ಣ ಅವರ ಮೇಲೆ ಹಲ್ಲೆ ನಡೆಸಿದ್ದನು.
ಗಂಭೀರವಾಗಿ ಗಾಯಗೊಂಡಿದ್ದ ಈರಣ್ಣ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿ ಶಶಿಧರ್ನನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
