Karnataka Voice

Latest Kannada News

ರಾತ್ರಿಯೇ “ಸತಿ ಕೊಂದ ಪತಿ”- ಹುಬ್ಬಳ್ಳಿಯಲ್ಲಿ ನಡೆಯಿತು ಹತ್ಯೆ…

Exclusive

ಗಂಡನಿಂದಲೇ ಹೆಂಡತಿಯ ಭೀಕರ ಕೊಲೆ: ಸ್ಥಳಕ್ಕೆ ಪೊಲೀಸರ ಭೇಟಿ

ಹುಬ್ಬಳ್ಳಿ: ಗಂಡನೊಬ್ಬ ತನ್ನ ಹೆಂಡತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾದ ಘಟನೆ ಹುಬ್ಬಳ್ಳಿಯ ಕಸಬಾಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಬಸವೇಶ್ವರ ನಗರದಲ್ಲಿ ನಿನ್ನೇ ತಡರಾತ್ರಿ ನಡೆದಿದ್ದು ಇಂದು ಬೆಳ್ಳಿಗ್ಗೆ ಬೆಳಕಿಗೆ ಬಂದಿದೆ.

ನೇಕಾರನಗರದಲ ಬರುವ ಬಸವೇಶ್ವರ ನಗರದಲ್ಲಿನ ವಾಸವಿದ್ದ ಸುಧಾ ಎಂಬ ಮಹಿಳೆಯನ್ನು ಆಕೆಯ ಪತಿ ಶಿವಯೋಗಿ ಎಂಬಾತ ನಿನ್ನೇ ತಡರಾತ್ರಿ ಕತ್ತು ಹಿಸುಕಿ ಕೊಲೆಗೈದು ಮನೆ ಬಾಗಿಲು ಹಾಕಿಕೊಂಡು ಪರಾರಿಯಾಗಿದ್ದಾನೆ.ಮನೆಯಲ್ಲಿದ್ದ ಮಗು ಅಳುತ್ತಿದ್ದ ಧ್ವನಿಯನ್ನು ಕೇಳಿ ಮನೆಯ ಬಾಗಿಲು ತೆಗೆದು ನೋಡಿದಾಗ ಸುಧಾ ಕೊಲೆಯಾದ ಘಟನೆ ಬೆಳಕಿಗೆ ಬಂದಿದೆ.

ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಕಸಬಾಪೇಟ್ ಠಾಣೆಯ ಪೊಲೀಸರು ಭೇಟಿಯನ್ನು ನೀಡಿ ಹಿರಿಯ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಿದ್ದಾರೆ,ಇನ್ನು ಘಟನಾ ಸ್ಥಳಕ್ಕೆ ಕಾನೂನು ಸುವ್ಯವಸ್ಥೆ ಡಿಸಿಪಿ ಎಂ ರಾಜೀವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಆರೋಪಿಯನ್ನು ಆದಷ್ಟು ಬೇಗ ಬಂದನ ಮಾಡುತ್ತೇವೆ ಅಂತಾ ತಿಳಿಸಿದ್ದಾರೆ

Leave a Reply

Your email address will not be published. Required fields are marked *