Posts Slider

Karnataka Voice

Latest Kannada News

ನವಲಗುಂದ ಬಳಿ ಭೀಕರ ಅಪಘಾತ: ಆತ ಉಳಿಯೋದೇ ಡೌಟು…

1 min read
Spread the love

ಧಾರವಾಡ: ಜಿಲ್ಲೆಯ ನವಲಗುಂದ ಪಟ್ಟಣದ ಬಳಿ ಕಬ್ಬು ಹೇರಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರವೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕನಿಗೆ ಗಂಭೀರವಾಗಿ ಗಾಯಗಳಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ.

ಹುಬ್ಬಳ್ಳಿ ಕಡೆಯಿಂದ ನರಗುಂದನತ್ತ ಹೊರಟಿದ್ದ ಕಬ್ಬು ತುಂಬಿದ ಟ್ರ್ಯಾಕ್ಟರವೊಂದು ನವಲಗುಂದ ಹೊರವಲಯದಲ್ಲಿ ನರಗುಂದ ಕಡೆಯಿಂದ ಹುಬ್ಬಳ್ಳಿಯತ್ತ ಹೊರಟಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ವೇಗವಾಗಿ ಎರಡು ವಾಹನಗಳು ಚಲಾಯಿಸುತ್ತಿದ್ದರಿಂದ, ಡಿಕ್ಕಿ ರಭಸಕ್ಕೆ ಲಾರಿ ಚಾಲಕನ ತಲೆಗೆ ಬಲವಾದ ಪೆಟ್ಟು ಬಿದ್ದಿದೆ.

ಅಪಘಾತ ನಡೆಯುತ್ತಿದ್ದ ಹಾಗೇ ಪರಾರಿಯಾಗಿದ್ದ ಟ್ರ್ಯಾಕ್ಟರ್ ಚಾಲಕನನ್ನ ನರಗುಂದ ಪಟ್ಟಣದಲ್ಲಿ ಹಿಡಿಯಲಾಗಿದ್ದು, ಗಾಯಾಳು ಮಹಾಂತೇಶ ಚಿಕ್ಕಮಟ್ಟಿ ಅವರನ್ನ ನವಲಗುಂದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಕಿಮ್ಸಗೆ ರವಾನೆ ಮಾಡಲಾಗಿದೆ.

ಅಪಘಾತದಲ್ಲಿ ಲಾರಿಯ ಮುಂಭಾಗ ನಜ್ಜುಗುಜ್ಜಾಗಿದ್ದು, ಚಾಲಕನ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ನವಲಗುಂದ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುವ ಜೊತೆಗೆ ಪ್ರಕರಣವನ್ನ ದಾಖಲು ಮಾಡಿಕೊಂಡಿದ್ದಾರೆ.


Spread the love

Leave a Reply

Your email address will not be published. Required fields are marked *