Posts Slider

Karnataka Voice

Latest Kannada News

ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಎನ್.ಎಚ್.ಕೋನರೆಡ್ಡಿ ರಾಜೀನಾಮೆ…!

1 min read
Spread the love

ಹುಬ್ಬಳ್ಳಿ: ಮಹಾನಗರ ಪಾಲಿಕೆಯ ಚುನಾವಣೆಯ ಫಲಿತಾಂಶದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಜೆಡಿಎಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನವಲಗುಂದ ಕ್ಷೇತ್ರದ ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಹುಬ್ಬಳ್ಳಿಯಲ್ಲಿ ಈ ಬಗ್ಗೆ ಮಾತನಾಡಿದ ಎನ್.ಎಚ್.ಕೋನರೆಡ್ಡಿ, ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ 10 ಸೀಟುಗಳು ಬರಬಹುದೆಂದು ನಿರೀಕ್ಷೆ ಮಾಡಲಾಗಿತ್ತು. ಆದರೆ, ಒಂದೇ ಒಂದು ಸೀಟು ಬಂದಿದೆ. ಹೀಗಾಗಿ ನೈತಿಕ ಹೊಣೆಯನ್ನ ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದರು.

ಈ ಬಗ್ಗೆ ರಾಷ್ಟ್ರೀಯ ಜನತಾದಳದ ಅಧ್ಯಕ್ಷರು ಆಗಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡರಿಗೆ ಪತ್ರವನ್ನ ಬರೆದಿರುವ ಕೋನರೆಡ್ಡಿಯವರು, ಅದನ್ನ ಮಾಧ್ಯಮಗಳಿಗೆ ನೀಡಿದ್ದಾರೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಈ ಮೊದಲು 9 ಸ್ಥಾನಗಳಿದ್ದವು. ಆದರೆ, ಕ್ಷೇತ್ರ ವಿಂಗಡನೆಯಾದ ಮೇಲೆ ಹೆಚ್ಚಾಗುವ ಬದಲು ಒಂದೇ ಒಂದು ಸೀಟಿಗೆ ಮೀಸಲಾಗಿದ್ದಾರೆ. ಇದೇ ಕಾರಣಕ್ಕೆ ಕೋನರೆಡ್ಡಿಯವರು ಇಂತಹ ನಿರ್ಣಯ ತೆಗೆದುಕೊಂಡಿದ್ದಾರೆ.


Spread the love

Leave a Reply

Your email address will not be published. Required fields are marked *