ಅಧಿಕಾರಿಗಳು… ಮನಸಾಕ್ಷಿ… ಪ್ರಾಮಾಣಿಕತೆ ಮತ್ತೂ ಅನ್ಬುಕುಮಾರ..

ಅಧಿಕಾರಿಗಳು ಮನಃಸಾಕ್ಷಿಯಾಗಿ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ
– ಕಾರ್ಯದರ್ಶಿ ಅನ್ಬುಕುಮಾರ್
ಧಾರವಾಡ: ಅಧಿಕಾರಿಗಳು ತಮ್ಮ ವ್ಯಾಪ್ತಿಯ ಕ್ಷೇತ್ರಳಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿಬೇಕೆಂದು ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಬುಕುಮಾರ್ ಅವರು ಹೇಳಿದರು.
ಜಿಲ್ಲಾ ಪಂಚಾಯತ್ ಸಭಾಭವನದಲ್ಲಿಂದು ಜರುಗಿದ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಹಶೀಲ್ದಾರರು, ಉಪವಿಭಾಗಾಧಿಕಾರಿಗಳು ಸೇರಿದಂತೆ ವಿವಿಧ ಅಬಿವೃದ್ಧಿ ಇಲಾಖೆಗಳ ಅಧಿಕಾರಿಗಳು ರೈತ ಸಂಪರ್ಕ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಶಾಲಾ-ಕಾಲೇಜು ವಿದ್ಯಾರ್ಥಿ ನಿಲಯಗಳು, ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಸಾರ್ವಜನಿಕ ಅಹವಾಲುಗಳನ್ನು ಆಲಿಸಿ ಸ್ಪಂಧಿಸುವಂತೆ ಅವರು ತಿಳಿಸಿದರು.
ಎಲ್ಲ ಶಾಲಾ ಕಾಲೇಜುಗಳು ಹಾಗೂ ಸರ್ಕಾರಿ ಕಟ್ಟಡಗಳ ಆವರಣದಲ್ಲಿ ಕಡ್ಡಾಯವಾಗಿ ಸಸಿ ನೆಟ್ಟು ಹಸರೀಕರಣದಲ್ಲಿ ಪಾಲ್ಗೊಳ್ಳತಕ್ಕದ್ದು, ಉದ್ಯೋಗ ಖಾತ್ರಿ ಹಾಗೂ ಇನ್ನಿತರ ಗ್ರಾಮೀಣ ಅಭಿವೃದ್ಧಿ ಯೋಜನೆಗಳಲ್ಲಿ ಕಿರುಕಾಡು ನಿರ್ಮಾಣಕ್ಕೆ ಒತ್ತು ನೀಡಬೇಕೆಂದು ಅನ್ಬುಕುಮಾರ ತಿಳಿಸಿದರು.
ಇತ್ತಿಚೆಗೆ ಚಿತ್ರದುರ್ಗ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಕಲುಷಿತ ನೀರು ಸರಬರಾಜುಗೊಂಡು, ತೀವೃ ಆರೋಗ್ಯ ಸಮಸ್ಯೆಯಿಂದ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಲ್ಲೂ ಸಹ ನಿಗಾ ವಹಿಸಿ ಪ್ರತಿ ಗ್ರಾಮಗಳ ನೀರು ಪರೀಕ್ಷೆಗಳನ್ನು ಕಡ್ಡಾಯವಾಗಿ ಕೈಗೊಳ್ಳಬೇಕು. ಕಲುಷಿತ ನೀರು ಸರಬರಾಜು ಘಟನೆ ಕಂಡು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ನೇರ ಹೊಣೆ ಮಾಡಲಾಗುವುದು. ಪ್ರತಿದಿನದ ನೀರು ಪೂರೈಕೆಯ ವರದಿಗಳನ್ನು ವಾಟ್ಸ್ಅಪ್, ಇಮೇಲ್ಗೆ ಹಾಕಬೇಕು. ಆಯಾ ತಾಲೂಕಾ ಅಧಿಕಾರಿಗಳು ಉಸ್ತುವಾರಿ ಮಾಡತಕ್ಕದ್ದೆಂದು ತಿಳಿಸಿದರು.
ಕಳೆದ ಒಂದು ತಿಂಗಳಿನಿಂದ ಸಾಧಾರಣ ಮಳೆಯಾಗಿದ್ದು, ಹಾಲಿ ಕೊಳವೆ ಬಾವಿಗಳ ಅಂತರ್ಜಲಮಟ್ಟ ಹೆಚ್ಚಿ ಹಾಗೂ ಟ್ಯಾಂಕರ್ ಮತ್ತು ಬಾಡಿಗೆ ಕೊಳವೆ ಬಾವಿಗಳ ಮೂಲಕ ಸಮಸ್ಯೆ ಬಗೆಹರಿಸಲಾಗಿದೆ. 08 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ 05 ಬಾಡಿಗೆ ಬೋರ್ವೆಲ್ಗಳ ಮೂಲಕ ಸಮಸ್ಯೆ ಬಗೆಹರಿಸಲಾಗಿದೆಯೆಂದು ಅಧಿಕಾರಿಗಳು ಸಭೆಗೆ ತಿಳಿಸಿದರು.
2022-23 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಯೋಜನೆಗೆ ಸಂಬಂಧಿಸಿದಂತೆ, 1,08,007 ರೈತರಿಗೆ ಒಟ್ಟು 75.6282 ಕೋಟಿ ರೂ.ಗಳ ವಿಮಾ ಪರಿಹಾರವನ್ನು ಇತ್ಯರ್ಥ ಪಡಿಸಲಾಗಿದೆ.
2022-23ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆವಿಮೆ ಪರಿಹಾರ ಕುರಿತಂತೆ ಲೆಕ್ಕಚಾರ ಅಂತಿಮಗೊಂಡಿದ್ದ ವಿಮೆ ಪರಿಹಾರ ರೈತರ ಖಾತೆಗಳಿಗೆ ವರ್ಗಾವಣೆಯಾಗುವ ಹಂತದಲ್ಲಿದೆ ಎಂದರು. ಕೃಷಿ ಜಂಟಿ ನಿರ್ದೇಶಕರಾದ ಡಾ.ಕಿರಣಕುಮಾರ ಹೇಳಿದರು.
ಆಗಸ್ಟ್ 01, 2023 ರವರೆಗೆ ಶೇ.85 ರಷ್ಟು ಇ-ಕೆವೈಸಿ ಪ್ರಗತಿಯಾಗಿದ್ದು, ಬಾಕಿ ಇರುವ 18,627 ಫಲಾನುಭವಿಗಳಲ್ಲಿ 4739 ಫಲಾನುಭವಿಗಳು ಮೃತರಾಗಿದ್ದು, ವಿವರಗಳನ್ನು ಪೆÇೀರ್ಟಲ್ನಲ್ಲಿ ಸೇರಿಸಲು ಕ್ರಮ ಕೈಗೊಳ್ಳಲಾಗಿದ್ದು, ಶೇ.89 ರಷ್ಟು ಪ್ರಗತಿಯಾಗಿದೆ. ಉಳಿದ ಪ್ರಕರಣಗಳನ್ನು ಶೀಘ್ರವಾಗಿ ಇ-ಕೆವೈಸಿ ಮಾಡಿಸಲು ಹೆಚ್ಚು ಬಾಕಿಯಿರುವ ಗ್ರಾಮಗಳಿಗೆ ಅಧಿಕಾರಿಗಳನ್ನು ನಿಯೋಜಿಸಿ ಶೇ.100 ರಷ್ಟು ಪ್ರಗತಿ ಸಾಧಿಸಲು ಕಾರ್ಯದರ್ಶಿಗಳು ಸೂಚಿಸಿದರು.
ಪಿಡಿಓಗಳು ಈ ಕಾರ್ಯದಲ್ಲಿ ಬಳಸಿಕೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದರು.
ಜಿಲ್ಲೆಯಲ್ಲಿ ಚರ್ಮಗಂಟು ರೋಗ ಜಾನುವಾರುಗಳಿಗೆ ಹರಡದಂತೆ ಮುಂಜಾಗೃತ ಕ್ರಮವಾಗಿ 51108 ಜಾನುವಾರುಗಳಿಗೆ ಲಸಿಕೆಯನ್ನು ಹಾಕಲಾಗಿದೆ. ಅಲ್ಲದೇ ಇಲಾಖೆಯಿಂದ ವಿವಿಧ ಲಸಿಕಾ ಕಾರ್ಯಕ್ರಮ ಹಮ್ಮಿಕೊಂಡು ಲಸಿಕೆಗಳನ್ನು ಹಾಕಲಾಗುತ್ತಿದೆ. ಜಾನುವಾರುಗಳಿಗೆ ಚಪ್ಪೆ ಬೇನೆ-9949, ಗಂಟಲು ಬೇನೆ-81975, ಕುರಿ ಮತ್ತು ಮೇಕೆಗಳಲ್ಲಿ ಕರಳು-149452 ಬೆನೆಯ ಲಸಿಕೆಯನ್ನು ಹಾಕಲಾಗಿದೆ ಎಂದು ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ.ರವಿ ಸಾಲಿಗೌಡರ ಅವರು ತಿಳಿಸಿದರು.
ಜಿಲ್ಲೆಯಲ್ಲಿ ಯಾವುದೆ ಸಾಕ್ರಾಂಮಿಕ ರೋಗ ಉಲ್ಬಣಗೊಂಡಿರುವುದಿಲ್ಲ. ಮುಂಜಾಗೃತ ಕ್ರಮವಾಗಿ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಂಟುಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಶಶಿ ಪಾಟೀಲ ತಿಳಿಸಿದರು. ಜಿಲ್ಲೆಯಲ್ಲಿ ಪ್ರತಿ ತಿಂಗಳು 3 ಸಾವಿರ ಹೆರಿಗೆ ಆಗುತ್ತಿದ್ದು, ಕಳೆದ ತಿಂಗಳಲ್ಲಿ ಒಂದೆ ಒಂದು ಮರಣ ದಾಖಲಾಗಿದೆ. ತಾಯಿ ಮರಣ ಪ್ರಮಾಣದ ಪರಿಶೀಲನೆ ಮಾಡಿ ಎಂದು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸೂಚಿಸಿದರು.
ತಾಯಂದಿರ ಮರಣ ಪ್ರಮಾಣವನ್ನು ಕಡಿಮೆ ಮಾಡಲು ಎಲ್ಲ ಅಗತ್ಯ ಕ್ರಮ ಕೈಕೊಳ್ಳಲಾಗಿದೆ. ತಾಯಂದಿರ ಮರಣ ಜರುಗಿದ ದಿನವೇ ಸದರಿ ಪ್ರಕರಣದ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆಯನ್ನು ಜರುಗಿಸಿ ಸಭೆಯಲ್ಲಿ ಮರಣಕ್ಕೆ ಕಾರಣಗಳನ್ನು ವಿಶ್ಲೇಷಿಸಲಾಗುತ್ತಿದೆ. ಅದರಂತೆ ಮುಂದಿನ ದಿನಗಳಲ್ಲಿ ತಾಯಂದಿರ ಮರಣ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಎಲ್ಲ ಅವಶ್ಯಕ ಕ್ರಮಗಳನ್ನು ಕೈಕೊಳ್ಳಲಾಗುತ್ತಿದೆಯೆಂದು ಡಾ. ಶಶಿ ಪಾಟೀಲ ತಿಳಿಸಿದರು.
ಜಿಲ್ಲೆಯ ಶಾಲೆಗಳಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಂಡು 20,800 ಸಸಿಗಳನ್ನು ನೆಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ ಅವರು ಸಭೆಗೆ ತಿಳಿಸಿದರು.
ಜಿಲ್ಲೆಗೆ ಹೂಸದಾಗಿ 10 ಮೆಟ್ರಿಕ ನಂತರ ವಿದ್ಯಾರ್ಥಿಗಳ ನಿಲಯಗಳ ಹಾಗೂ 8 ಮೂರಾರ್ಜಿ ದೇಸಾಯಿ ವಸತಿ ನಿಲಯಗಳಿಗೆ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿನಿರ್ದೇಶಕ ಅಲಾಬಕಾಷ್ ಅವರು ಸಭೆಗೆ ತಿಳಿಸಿದರು. ಹಾಸ್ಟೆಲ್ಗಳಲ್ಲಿ ಕಡ್ಡಾಯವಾಗಿ ಸಿಸಿ ಟಿವಿ ಅಳವಡಿಸಿ ವಿದ್ಯಾರ್ಥಿಗಳಿಗೆ ತೂಂದರೆಯಾಗದಂತೆ ನಿಗವಹಿಸಬೇಕೇಂದು ಕಾರ್ಯದರ್ಶಿ ಅನ್ಬುಕುಮಾರ ಅವರು ತಿಳಿಸಿದರು.
ಗರ್ಭಿಣೆ ಹಾಗೂ ಬಾಣಂತಿಯರ ಮರಣ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಈಗಾಗಲೇ ಆರೋಗ್ಯ ಇಲಾಖೆಯವರ ಸಹಕಾರದೊಂದಿಗೆ ಕಾರ್ಯನಿರ್ವಹಿಸಲಾಗುತ್ತಿದೆ. ಅಂಗನವಾಡಿ ಕೇಂದ್ರದಲ್ಲಿ ಚುಚ್ಚುಮದ್ದು ನಡೆಯುವ ಅವಧಿಯಲ್ಲಿ ಗರ್ಭಿಣಿಯರನ್ನು ಖುದ್ದಾಗಿ ಕರೆತಂದು ಚುಚ್ಚುಮದ್ದು ಹಾಕಿಸಲಾಗಿತ್ತಿದೆ ಮತ್ತು ಆರೋಗ್ಯ ತಪಾಸಣೆ ಕುರಿತಂತೆ ಮಾಹಿತಿಯನ್ನು ಒದಗಿಸಲಾಗುತ್ತಿದೆ. ಅಂಗನವಾಡಿ ಕೇಂದ್ರಗಳಲಿ ಜರಗುವ ತಾಯಂದಿರ ಸಭೆಗಳಲ್ಲಿ ಹಾಗೂ ಮನೆ ಬೇಟಿ ಸಂಧರ್ಭಗಳಲ್ಲಿ ಸಮತೋಲನ ಆಹಾರ ಸೇವನೆ,ಕಬ್ಬಿಣಾಂಶ ಮತ್ತು ಕ್ಯಾಲ್ಸಯಂ ಮಾತ್ರೆಗಳ ಸೇವನೆ ಅಗತ್ಯತೆಯ ಬಗ್ಗೆ ಗರ್ಭಿಣೆ, ಬಾಣಂತಿ ಹಾಗೂ ಮಕ್ಕಳ ಆರೋಗ್ಯ ಬಗ್ಗೆ ವಿವರವಾಗಿ ಮನದಟ್ಟು ಮಾಡಿಕೊಂಡಲಾಗಿತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮನೆ ಯಜಮಾನಿಗೆ ತಿಂಗಳಿಗೆ ರೂ 2,000/- ನೀಡುವ ಯೋಜನೆಗೆ ನೋಂದಣಿ ಕಾರ್ಯ ಆರಂಭವಾಗಿರುತ್ತದೆ. ಧಾರವಾಡ ಜಿಲ್ಲೆಯಲ್ಲಿ ಒಟ್ಟು 3,82,523 ಮಹಿಳೆಯರು ಈ ಯೋಜನೆಯ ಉಪಯೋಗವನ್ನು ಪಡೆಯಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ ಜಿ. ಅವರು ತಿಳಿಸಿದರು.
ಶಕ್ತಿ ಯೋಜನೆಯಡಿ ಧಾರವಾಡ ಜಿಲ್ಲೆಯಲ್ಲಿ ಜುಲೈ ಅಂತ್ಯದವರೆಗೆ 1.51 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದು, ರೂ. 30.77 ಕೋಟಿ ಮೊತ್ತದ ಸೇವೆಯನ್ನು ಪಡೆದಿರುತ್ತಾರೆಂದು ಅಧಿಕಾರಿಗಳು ತಿಳಿಸಿದರು.
ಗೃಹಜ್ಯೋತಿ ಯೋಜನೆ ಅಡಿಯಲ್ಲಿ ಒಟ್ಟು 5,44,181 ಬಳಕೆದಾರರಿದ್ದು, ಇದರಲ್ಲಿ 4,18,250 ಗ್ರಾಹಕರು ಈಗಾಗಲೇ ಪ್ರಯೋಜನ ಪಡೆದುಕೊಂಡಿರುತ್ತಾರೆಂದು ಹೆಸ್ಕಾಂ ಅಧಿಕಾರಿಗಳು ತಿಳಿಸಿದರು.
ಅನ್ನಭಾಗ್ಯ ಯೋಜನೆಯಡಿ ಧಾರವಾಡ ಜಿಲ್ಲೆಯಲ್ಲಿ 3,87,124 ಬಿ.ಪಿ.ಎಲ್.ಕುಟುಂಬಗಳಿಗೆ ಆಹಾರ ಭದ್ರತೆಯನ್ನು ಒದಗಿಸಲಾಗಿದೆ. ಬಿ.ಪಿ.ಎಲ್. ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ರೂ.170 ಗಳಂತೆ ರೂ.16.67 ಕೋಟಿಗಳನ್ನು ಅವರ ಖಾತೆಗೆ ಜಮೆ ಮಾಡಲಾಗಿದೆ ಎಂದು ಸಭೆಯ ಗಮನಕ್ಕೆ ತರಲಾಯಿತು.
ಸಭೆಯ ನಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾಧಿಕಾರಿಗಳು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು.
ಸಭೆಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.