Posts Slider

Karnataka Voice

Latest Kannada News

Spread the love

ಬೆಂಗಳೂರು: ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೈಹಿಕ ಶಿಕ್ಷಣ ಶಿಕ್ಷಕರೋರ್ವರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದು, ಮಹತ್ವದ ಮಾಹಿತಿಯನ್ನ ಕಲೆ ಹಾಕಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿಯ ವೆಂಕಟೇಶ ಎಂಬ ದೈಹಿಕ ಶಿಕ್ಷಣ ಶಿಕ್ಷಕ ಕೊರಟಗೆರೆಯ  ಡಾ.ಬಿ.ಆರ್.ಅಂಬೇಡ್ಕರ ವಸತಿ ಶಾಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದರು.

ಈಗಾಗಲೇ ಬಂಧಿತನಾಗಿರುವ ರಾಚಪ್ಪ ಎಂಬಾತ ನೀಡಿದ ಮಾಹಿತಿಯ ಮೇರೆಗೆ ದೈಹಿಕ ಶಿಕ್ಷಣ ಶಿಕ್ಷಕನನ್ನ ಬಂಧನ ಮಾಡಲಾಗಿದ್ದು, ಎಫ್ ಡಿಎ ಪರೀಕ್ಷೆಯ ಪ್ರಶ್ನೆಪತ್ರಿಕೆ ಮಾರಾಟ ಮಾಡಲು ಬಳಕೆ ಮಾಡಿಕೊಂಡಿದ್ದನ್ನ ಹೇಳಿಕೊಂಡಿದ್ದಾನೆ.

ಆರೋಪಿ ವೆಂಕಟೇಶ, ಬೆಳಗಾವಿ ಜಿಲ್ಲೆಯ ಹಲವರಿಗೆ ಪ್ರಶ್ನೆಪತ್ರಿಕೆಯನ್ನ ಕೊಟ್ಟಿರಬಹುದೆಂದು ಅನುಮಾನವಿದ್ದು, ಈ ಬಗ್ಗೆ ವಿಚಾರಣೆಯನ್ನ ಮಾಡಲಾಗುತ್ತಿದೆ.


Spread the love

Leave a Reply

Your email address will not be published. Required fields are marked *