Posts Slider

Karnataka Voice

Latest Kannada News

ಶೆಡ್‌ಲ್ಲಿ ಕೂಡಿ ಹಾಕಿ “ಚಮಚ ಸುಟ್ಟು” ಬರೆ ಹಾಕಿದ ಪೊಲೀಸ್ ಪತಿ…!!!!

1 min read
Spread the love

ಶೆಡ್‌ಲ್ಲಿ ಕೂಡಿ ಹಾಕಿ ಬರೆ ಹಾಕಿದ ಪೊಲೀಸ್ ಪತಿ

ಕಂಗಾಲಾದ ಪತ್ನಿ ಆಸ್ಪತ್ರೆಗೆ ದಾಖಲು

ಬೆಳಗಾವಿ: ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಬೆಂಗಳೂರಿನ ಪಟ್ಟಣಗೆರೆ ಶೆಡ್ನಲ್ಲಿ ಕೂಡಿ ಹಾಕಿ ದರ್ಶನ್ ಗ್ಯಾಂಗ್ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆಯ ಸುದ್ದಿ ಬಿಸಿಯಾಗಿರುವಾಗಲೇ… ಜನರಿಗೆ ನ್ಯಾಯ ಕೊಡಿಸಬೇಕಿದ್ದ ಪೊಲೀಸಪ್ಪ ಹೆಂಡತಿಯ ಶೀಲ ಶಂಕಿಸಿ ಶೆಡ್ನಲ್ಲಿ ಕೂಡಿಟ್ಟು ಮಾರಣಾಂತಿಕ ಹಲ್ಲೆ ಮಾಡಿದ್ದಲ್ಲದೆ, ಮನಸೋ ಇಚ್ಚೆ ಮೈಮೇಲೆ ಬರೆ ಹಾಕಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವಾತ, ಹೆಂಡತಿಗೆ ಕಳೆದ ಎರಡು ತಿಂಗಳಿನಿಂದ ಶೀಲ ಶಂಕಿಸಿ ಶೆಡ್ನಲ್ಲಿ ಕೂಡಿಟ್ಟು ಹಲ್ಲೆ ಮಾಡಿ ಬರೆ ಹಾಕಿದ್ದಾನೆ ಎಂದು ಪೊಲೀಸಪ್ಪನ ಪತ್ನಿ ಪ್ರತಿಮಾ ಯಲ್ಲಪ್ಪ ಅಸಗೆ ಆರೋಪಿಸಿದ್ದಾಳೆ.

ವೀಡಿಯೋ….

ರಾಯಬಾಗ ತಾಲೂಕಿನ ನಿಡಗುಂಡಿ ಗ್ರಾಮದ ಪ್ರೀಯಾಂಕಾಗೆ ಅಥಣಿ ತಾಲೂಕಿನ ಕುನ್ನಾಳ ಗ್ರಾಮದ ಯಲ್ಲಪ್ಪ ಅಗಸೆಗೆ ಕಳೆದ 10 ವರ್ಷಗಳ ಹಿಂದೆಯೇ ಮದುವೆ ಮಾಡಿಕೊಡಲಾಗಿದೆ. ಸದ್ಯ ಯಲ್ಲಪ್ಪ ವಿಜಯಪುರ ತಾಲೂಕಿನ ತಿಕೋಟಾದಲ್ಲಿ ಪೊಲೀಸ್ ಪೇದೆಯಾಗಿ ಕೆಲಸ ಮಾಡುತ್ತಿದ್ದಾನೆ. ಇವರಿಗೆ ಮೂವರು ಮಕ್ಕಳಿದ್ದರೂ ಪತ್ನಿಯ ಶೀಲದ ಮೇಲೆ ಶಂಕೆ ಮಾಡಿ ಶೆಡ್ನಲ್ಲಿ ಕೂಡಿ ಹಾಕಿ ಮನಸೋ ಇಚ್ಚೆ ಹಲ್ಲೆ ಮಾಡಿ ಬರೆ ಹಾಕಿದ್ದಾನೆ.

ನನ್ನ ತವರು ಮನೆಯವರು ನನಗೆ ನೋಡಲು ಬಂದಾಗ ಅವರಿಗೂ ಸಹ ನನ್ನ ಪತಿ ಬೇದರಿಕೆ ಹಾಕಿದ್ದಲ್ಲದೆ, ನಿಮ್ಮ ಮಗಳು ಬೇರೆಯವರೊಂದಿಗೆ ಓಡಿ ಹೋಗಿದ್ದಾಳೆ ಎಂದು ದೂರು ಕೊಟ್ಟು ನಿಮ್ಮ ಮೇಲೆಯೇ ಕೇಸ್ ದಾಖಲಿಸುತ್ತೇನೆ ಎಂದು ಬೇದರಿಕೆ ಹಾಕಿದ್ದಾನೆ.

ಶೆಡ್ನಲ್ಲಿ ಯಾರೂ ಇಲ್ಲದ ವೇಳೆ ತಪ್ಪಿಸಿಕೊಂಡು ಬಂದು ಬೆಳಗಾವಿಯ ಮಹಿಳಾ ಸಂಘದ ಸಹಾಯದಿಂದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನಾಳೆ ಬೆಳಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಅವರನ್ನು ಭೇಟಿಯಾಗಿ ನನ್ನ ಪತಿಯ ಮೇಲೆ ದೂರು ಕೊಡುವುದಾಗಿ ಪ್ರತಿಮಾ ಸುದ್ದಿಗಾರರ ಮುಂದೆ ತಿಳಿಸಿದ್ದಾಳೆ.


Spread the love

Leave a Reply

Your email address will not be published. Required fields are marked *