Posts Slider

Karnataka Voice

Latest Kannada News

‘ಕೊರೋನಾ ಪೀಡಿತ ಪೊಲೀಸರಿಗೆ’ ಧೈರ್ಯ ತುಂಬಿದ ಪೊಲೀಸ್ ಕಮೀಷನರ್ ಲಾಬುರಾಮ್…

1 min read
Spread the love

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ನೂರಾರೂ ಪೊಲೀಸರಿಗೆ ಕೊರೋನಾ ಸೋಂಕು ತಗುಲಿದ್ದು, ಇಂದು ಪೊಲೀಸ್ ಕಮೀಷನರ್ ಲಾಬುರಾಮ್ ಅವರೆಲ್ಲರಿಗೂ ವೀಡಿಯೋ ಕಾನ್ಸರೆನ್ಸ್ ಮೂಲಕ ಧೈರ್ಯವನ್ನ ಹೇಳಿದ್ದಾರೆ.

ಸಾರ್ವಜನಿಕರ ಸೇವೆಗಾಗಿ ನಿರಂತರವಾಗಿ ಕರ್ತವ್ಯ ನಿರ್ವಹಿಸುವ ಪೊಲೀಸರಿಗೆ ಕೊರೋನಾ ಸೋಂಕು ತಗುಲಿದ್ದು, ಅವರೆಲ್ಲರಿಗೂ ಮನೆಯ ಹಿರಿಯ ಸದಸ್ಯನಂತೆ ಕಾಳಜಿ ತೋರಿಸಿದ್ದಾರೆ.

ಅವಳಿನಗರದಲ್ಲಿ ನೂರಕ್ಕೂ ಹೆಚ್ಚು ಪೊಲೀಸರಿಗೆ ಕೊರೋನಾ ಸೋಂಕು ತಗುಲಿದೆ. ಬಹುತೇಕ ಪೊಲೀಸ್ ಠಾಣೆಗಳಲ್ಲಿ 10 ರಿಂದ 15 ಪೊಲೀಸರಿಗೆ ಕೊರೋನಾ ಸೋಂಕು ತಗುಲಿದ್ದು, ಕರ್ತವ್ಯ ನಿರ್ವಹಿಸಲು ಇನ್ನುಳಿದವರು ಹೆಣಗಾಡುತ್ತಿದ್ದಾರೆ.

ಇದೇಲ್ಲದರ ನಡುವೆಯೂ ಪೊಲೀಸ್ ಕಮೀಷನರ್ ಲಾಬುರಾಮ್ ಅವರು ತಮ್ಮ ಸಹೋದ್ಯೋಗಿಗಳೊಂದಿಗೆ ಸೇರಿಕೊಂಡು ಅವಳಿನಗರದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.


Spread the love

Leave a Reply

Your email address will not be published. Required fields are marked *