Posts Slider

Karnataka Voice

Latest Kannada News

ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಕಚೇರಿಯಲ್ಲಿ…!

Spread the love

ಹುಬ್ಬಳ್ಳಿ: ಸಾರ್ವಜನಿಕ ಗಣೇಶೋತ್ಸವದ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಕಚೇರಿಯಲ್ಲಿ ಪೊಲೀಸ್ ಕಮೀಷನರ್ ಲಾಬುರಾಮ್ ಅವರು ಮಹತ್ವದ ಸಭೆಯನ್ನ ಜನರೊಂದಿಗೆ ಆರಂಭಿಸಿದ್ದಾರೆ.

ಅವಳಿನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪ್ರಮುಖರನ್ನ ಸಭೆಗೆ ಆಹ್ವಾನಿಸಿದ್ದು, ಜಿಲ್ಲಾಡಳಿತ ತೆಗೆದುಕೊಂಡಿರುವ ತೀರ್ಮಾನಗಳನ್ನ ವಿವರಣೆ ಮಾಡಲಿದ್ದಾರೆ.

ಈಗಾಗಲೇ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಗಣೇಶ ವಿಗ್ರಹಗಳ ಅಳತೆ ಹಾಗೂ ದಿನಗಳ ಬಗ್ಗೆ ಮಾಹಿತಿಯನ್ನ ನೀಡಿದ್ದಾರೆ. ಸಾರ್ವಜನಿಕ ಪ್ರದೇಶದಲ್ಲಿ ಗಣೇಶನ ಪ್ರತಿಷ್ಠಾಪನೆ ವೇಳೆಯಲ್ಲಿ ತೆಗೆದುಕೊಳ್ಳಬೇಕಾದ ಕ್ರಮದ ಬಗ್ಗೆಯೂ ಸಭೆಯಲ್ಲಿ ವಿವರಿಸಲಾಗುತ್ತಿದೆ.

ಕಾನೂನು ಪಾಲನೆ ಮಾಡುವ ಜೊತೆಗೆ ಕೋವಿಡ್ ನಿಯಮಗಳನ್ನ ಕಟ್ಟುನಿಟ್ಟಾಗಿ ಪಾಲಿಸುವಂತೆ ಪೊಲೀಸ್ ಹಿರಿಯ ಅಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿಕೊಂಡರು.

ಪೊಲೀಸ್ ಕಮೀಷನರ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಾಲಿಕೆ ಆಯುಕ್ತ ಸುರೇಶ ಇಟ್ನಾಳ, ಡಿಸಿಪಿ ಕೆ.ರಾಮರಾಜನ್, ತಹಶೀಲ್ದಾರ ನಾಶಿ ಸೇರಿದಂತೆ ಹಲವರು ಭಾಗಿಯಾಗಿದ್ದರು.


Spread the love

Leave a Reply

Your email address will not be published. Required fields are marked *