Posts Slider

Karnataka Voice

Latest Kannada News

ತನಿಖಾ ಚಾಣಾಕ್ಷನಿಗೆ ಒಲಿದ ರಾಷ್ಟ್ರಪತಿ ಮೆಡಲ್: ಧಾರವಾಡದ ಕೀರ್ತಿ ಹೆಚ್ಚಿಸಿದ “PI” ಮೊಹ್ಮದರಫೀಕ್ ತಹಶೀಲ್ದಾರ್.”

Spread the love

ಧಾರವಾಡ: ಇಲ್ಲಿನ ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮೊಹ್ಮದ್ ರಫೀಕ್ ತಹಶೀಲ್ದಾರ್ ಅವರು ಈ ವರ್ಷದ ಪ್ರತಿಷ್ಠಿತ ‘ರಾಷ್ಟ್ರಪತಿ ಪದಕ’ಕ್ಕೆ ಭಾಜನರಾಗಿದ್ದಾರೆ. ರಾಜ್ಯದ 48 ಅಧಿಕಾರಿಗಳ ಪೈಕಿ ಅತ್ಯಂತ ಕಠಿಣ ಆಯ್ಕೆ ಪ್ರಕ್ರಿಯೆಯ ನಂತರ ಘೋಷಣೆಯಾದ 20 ಅಧಿಕಾರಿಗಳ ಪಟ್ಟಿಯಲ್ಲಿ ಇವರು ಸ್ಥಾನ ಪಡೆದಿದ್ದಾರೆ.

​ಕಳೆದ ಹತ್ತು ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿರಂತರ ಸೇವೆ ಸಲ್ಲಿಸುತ್ತಿರುವ ರಫೀಕ್ ಅವರು, ಹಿಂದೆ ಹುಬ್ಬಳ್ಳಿಯ ಶಹರ ಠಾಣೆಯಲ್ಲೂ ದಕ್ಷ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು. ಜಟಿಲ ಪ್ರಕರಣಗಳನ್ನು ಭೇದಿಸಿ ಆರೋಪಿಗಳಿಗೆ ಶಿಕ್ಷೆ ಕೊಡಿಸುವಲ್ಲಿ ಇವರು ಚಾಣಾಕ್ಷತನ ಮೆರೆದಿದ್ದಾರೆ. ಸಾರ್ವಜನಿಕ ಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿರುವ ಇವರ ಈ ಸಾಧನೆಯು ಜಿಲ್ಲೆಯ ಪೊಲೀಸ್ ಪಡೆಗೆ ಮಾದರಿಯಾಗಿದ್ದು, ಸಾರ್ವಜನಿಕ ವಲಯದಲ್ಲಿ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.


Spread the love

Leave a Reply

Your email address will not be published. Required fields are marked *

You may have missed