ಧರ್ಮದ ವಿರುದ್ಧ ಹೇಳಿಕೆ: ಹುಬ್ಬಳ್ಳಿಯಲ್ಲಿ AIMIM ಪ್ರತಿಭಟನೆ..

ಹುಬ್ಬಳ್ಳಿ: ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಘಾಜಿಯಾಬಾದ್ ನ ದಶ್ನ ದೇವಿ ಮಂದಿರದ ಮಹಾಂತ ಸ್ವಾಮಿ ಯತಿ ನರಸಿಂಗಾನಂದ ಸರಸ್ವತಿಯವರ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿ, ಹುಬ್ಬಳ್ಳಿಯಲ್ಲಿಂದು ಎಐಎಂಐಎಂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಪ್ರಮುಖ ರಸ್ತೆಯ ಮೂಲಕ ಮೆರವಣಿಗೆ ಮೂಲಕ ತಹಶೀಲ್ದಾರ ಕಚೇರಿಗೆ ಆಗಮಿಸಿದ ಪಕ್ಷದ ಕಾರ್ಯಕರ್ತರು, ಧರ್ಮದ ಬಗ್ಗೆ ಅಪಮಾನಕಾರಿಯಾಗಿ ಮಾತನಾಡುವುದರ ವಿರುದ್ಧ ಪ್ರಕರಣ ದಾಖಲು ಮಾಡಿ, ಕ್ರಮ ಜರುಗಿಸುವಂತೆ ಆಗ್ರಹಿಸಿದರು.
ಆಲ್ ಇಂಡಿಯಾ ಮಜ್ಲೀಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷದ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾಧ್ಯಕ್ಷ ನಜೀರ ಅಹ್ಮದ ಹೊನ್ಯಾಳ ನೇತೃತ್ವದಲ್ಲಿ ಮನವಿಯನ್ನ ತಹಶೀಲ್ದಾರ ಮೂಲಕ ನೀಡಿ, ಧರ್ಮದ ಬಗ್ಗೆ ಮಾತನಾಡಿದವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಲಾಯಿತು.