ಕುಂದಗೋಳ: ತಹಶೀಲ್ದಾರ್ ವಾಹನ ತಡೆದು ರೊಚ್ಚಿಗೆದ್ದ ಮಹಿಳೆಯರು… ಅಧಿಕಾರಿಗಳ ಸ್ಥಿತಿ ಹೆಂಗಾಗಿತ್ತು ಗೊತ್ತಾ..!? ವೀಡಿಯೋ ನೋಡಿ…
ಹುಬ್ಬಳ್ಳಿ: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಗ್ರಾಮಸ್ಥರು ತಹಶೀಲ್ದಾರ್ ವಾಹನಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಕುಂದಗೋಳ ತಾಲೂಕಿನ ಶಿರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.
Exclusive Video…
ಶಿರೂರು ಗ್ರಾಮದ ನವಗ್ರಾಮದಲ್ಲಿ ಹಲವು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಮೂಲಭೂತ ಸೌಕರ್ಯಗಳ ಕೊರತೆಯೂ ಇದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸ್ಥಳೀಯ ಆಡಳಿತದಿಂದ ಸಮರ್ಪಕ ಸ್ಪಂದನೆ ದೊರೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ನಡುವೆ ಶಿರೂರು ಮಾರ್ಗವಾಗಿ ತೆರಳುತ್ತಿದ್ದ ಕುಂದಗೋಳ ತಹಶೀಲ್ದಾರ್ ರಾಜು ಅವರ ವಾಹನವನ್ನು ಮಹಿಳೆಯರು ತಡೆದು ಸಮಸ್ಯೆಗಳನ್ನು ತೋಡಿಕೊಂಡರು. ಕೂಡಲೇ ಸ್ಥಳೀಯ ಗ್ರಾಮ ಪಂಚಾಯಿತಿ ಸಿಬ್ಬಂದಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿದ ತಹಶೀಲ್ದಾರ್, ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವಂತೆ ಖಡಕ್ ಸೂಚನೆ ನೀಡಿದರು.
ನಂತರ ಶಿರೂರು ಗ್ರಾಮದ ಪ್ರಮುಖ ಸಮಸ್ಯೆಗಳಿರುವ ಸ್ಥಳಗಳಿಗೆ ಭೇಟಿ ನೀಡಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಶೀಘ್ರ ಒದಗಿಸದಿದ್ದರೆ ಜಿಲ್ಲಾ ಅಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಕುಂದಗೋಳ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯಿತಿ ಇಂಜಿನಿಯರ್ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.
