Posts Slider

Karnataka Voice

Latest Kannada News

Big Breaking- ಸಿಡಿಲು ಬಡಿದು ಒಂದೇ ಕುಟುಂಬದ ಮೂವರ ದುರ್ಮರಣ…

Spread the love

ಮಳೆಯಿಂದ ತಪ್ಪಿಸಿಕೊಳ್ಳಲು ಮರದ ಕೆಳಗೆ ಹೋದ

ಸಮಯದಲ್ಲಿ ಸಿಡಿಲು ಬಡಿತ

ಬಳ್ಳಾರಿ: ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಸಾವಿಗೀಡಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ರಾರಾವಿ ಗ್ರಾಮದಲ್ಲಿ ಸಂಭವಿಸಿದೆ.

ಮೃತರನ್ನ ರಾರಾವಿ ಗ್ರಾಮದ ಭೀರಪ್ಪ(45), ಸುನೀಲ (26) ಹಾಗೂ ವಿನೋದ (14) ಎಂದು ಗುರುತಿಸಲಾಗಿದ್ದು, ಕುರಿ ಮೇಯಿಸಲು ಹೋದಾಗ ದುರ್ಘಟನೆ ನಡೆದಿದೆ.

ಮೂವರ ಸಾವಿನಿಂದ ಮೃತರ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದ್ದು, ಸಂಬಂಧಿಕರು ಸಾಂತ್ವನ ಹೇಳುತ್ತಿದ್ದಾರೆ. ಘಟನೆಯ ಕುರಿತು ಸಿರಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

Leave a Reply

Your email address will not be published. Required fields are marked *