‘ರಾಯಲ್ ಎನ್ಫೀಲ್ಡ್’ ಕಳ್ಳನ ಬಂಧಿಸಿದ ಕೇಶ್ವಾಪುರ ಠಾಣೆ ಪೊಲೀಸರು…!
1 min readಹುಬ್ಬಳ್ಳಿ: ಲಾಕ್ ಡೌನ್ ವೇಳೆಯಲ್ಲಿಯೇ ಕೈಚಳಕ ತೋರಿಸಿದ್ದ ದ್ವಿಚಕ್ರ ವಾಹನ ಕಳ್ಳನನ್ನ ಬಂಧನ ಮಾಡುವಲ್ಲಿ ಕೇಶ್ವಾಪುರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಕೊರೋನಾ ಲಾಕ್ ಡೌನ್ ವೇಳೆಯಲ್ಲಿಯೇ ತನ್ನ ಚಾಳಿಯನ್ನ ಮುಂದುವರೆಸಿದ್ದ ಗದಗ ಜಿಲ್ಲೆಯ ನರಗುಂದ ಪಟ್ಟಣದ ಇಮಾಮಸಾಬ ದಾವಲಸಾಬ ಅಲಿಬಾಯಿ ಎಂಬಾತನನ್ನ ಪೊಲೀಸರು ಬಂಧನ ಮಾಡಿದ್ದಾರೆ.
ಬಂಧಿತ ಆರೋಪಿಯಿಂದ ಒಂದು ಲಕ್ಷ ರೂಪಾಯಿ ಮೌಲ್ಯದ ರಾಯಲ್ ಎನ್ ಫೀಲ್ಡ್ ಬೈಕನ್ನ ವಶಕ್ಕೆ ಪಡೆಸಿಕೊಳ್ಳಾಗಿದ್ದು, ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪಿಎಸ್ಐ ಬಾಬಾ ನೇತೃತ್ವದಲ್ಲಿ ಸಿಬ್ಬಂದಿಗಳಾದ M.D. ಕಾಲವಾಡ, ರಾಮರಾವ್ ರಾಥೋಡ್, ರಾಮಾಪುರ್, ಶರಣಪ್ಪ, ನದಾಫ, ರವಿ ಕೆಂದುರ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.