Posts Slider

Karnataka Voice

Latest Kannada News

ನಾಳೆಯಿಂದ ಶಾಲಾ-ಕಾಲೇಜು ಬಂದ್…!

Spread the love

ತೆಲಂಗಾಣ: ಇಲ್ಲಿನ ಸರಕಾರವೂ ಮಹತ್ವದ ನಿರ್ಣಯವನ್ನ ತೆಗೆದುಕೊಂಡಿದ್ದು, ನಾಳೆಯಿಂದ ಶಾಲೆ ಹಾಗೂ ಕಾಲೇಜುಗಳನ್ನ ಬಂದ್ ಮಾಡಲು ನಿರ್ಧಾರ ಮಾಡಿ ಆದೇಶ ಹೊರಡಿಸಲಾಗಿದೆ.

ಈ ಸಂಬಂಧ ಶಿಕ್ಷಣ ಸಚಿವೆ ಸಬಿತಾ ಇಂದ್ರರೆಡ್ಡಿ ಇಂದು ವಿಧಾನಸಭೆಯಲ್ಲಿ ಮಾತನಾಡಿದ್ದು, ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣದಿಂದ ಈ ನಿರ್ಧಾರವನ್ನ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ಶಾಲಾ ಕಾಲೇಜುಗಳನ್ನ ತಾತ್ಕಾಲಿಕವಾಗಿ ಮುಚ್ಚಲಾಗಿದೆಯಾದರೂ ಆನ್ ಲೈನ್ ಮೂಲಕ ತರಗತಿಗಳು ಮುಂದುವರೆಯಲಿವೆ. ಇದರಿಂದ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಸಮಸ್ಯೆಯಾಗಲಿಕ್ಕಿಲ್ಲವೆಂದು ಮಾಹಿತಿಯನ್ನ ನೀಡಿದರು.

ಕರ್ನಾಟಕದಲ್ಲೂ ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದು, ರಾಜ್ಯದಲ್ಲೂ ಇದೇ ನಿರ್ಣಯ ತೆಗೆದುಕೊಂಡರೂ ಅಚ್ಚರಿಯಿಲ್ಲ.


Spread the love

Leave a Reply

Your email address will not be published. Required fields are marked *