ಶಾಲೆ, ಕಾಲೇಜು ಬೇಸಿಗೆ ರಜೆ ಕಡಿತ: ಸಚಿವ ಸುರೇಶಕುಮಾರ
Warning: Attempt to read property "post_excerpt" on null in /home/karnatakavoice2026s/webapps/karnatakavoice2026s/wp-content/themes/newsphere/inc/hooks/hook-single-header.php on line 67
ಬೆಳಗಾವಿ: ಮುಂಬರುವ ಬೇಸಿಗೆ ರಜೆ ದಿನಗಳನ್ನು ಕಡಿತ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶಕುಮಾರ ಹೇಳಿದರು.
ನಗರದಲ್ಲಿ ಮಾತನಾಡಿದ ಸಚಿವ ಸುರೇಶಕುಮಾರ ಅವರು, ಕಳೆದ ವರ್ಷ ಕೊರೋನಾದಿಂದಾಗಿ ವಾರ್ಷಿಕ ಅವಧಿಯಲ್ಲಿ ಕಡಿತವಾಗಿದ್ದು, ಈ ಬಾರಿ ಬೇಸಿಗೆ ರಜೆ ಕಡಿತ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಕೊರೋನಾ ಭೀತಿಯ ಹಿನ್ನೆಲೆಯಲ್ಲಿ ಸಕಾಲಕ್ಕೆ ಶಾಲಾ, ಕಾಲೇಜುಗಳು ಪ್ರಾರಂಭವಾಗದ ಹಿನ್ನೆಲೆಯಲ್ಲಿ ಮಕ್ಕಳು ಶಿಕ್ಷಣದಿಂದ ದೂರ ಉಳಿಯುತ್ತಿದ್ದಾರೆಂದು ಬೇಸರ ವ್ಯಕ್ತಪಡಿಸಿದ ಸಚಿವರು, ಹೀಗೆ ಆಗಲು ನಾವೆಲ್ಲ ಬಿಡಬಾರದೆಂದು ಹೇಳಿದರು.
ಈಗಾಗಲೇ ಆರಂಭಿಸಿರುವ ಶಾಲೆ, ಕಾಲೇಜುಗಳಿಗೆ ಉತ್ತಮ ಪ್ರತಿಕ್ರಿಯೆ ಬಂದಿದ್ದು, ಪೋಷಕರು ಸಹಕಾರ ನೀಡುತ್ತಿದ್ದಾರೆ. ಇದೇಲ್ಲವನ್ನೂ ಗಮನಿಸಿಯೇ ಎಲ್ಲ ನಿರ್ಧಾರಗಳನ್ನ ತೆಗೆದುಕೊಳ್ಳಲಾಗುತ್ತಿದೆ ಎಂದು ಸಚಿವರು ಹೇಳಿದರು.

