Posts Slider

Karnataka Voice

Latest Kannada News

SSLC ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವಿನಾಯತಿ…!

1 min read
Spread the love

ಬೆಂಗಳೂರು: ರಾಜ್ಯದಲ್ಲಿ ಎಸ್ಎಎಸ್ ಎಲ್ ಸಿ ಪರೀಕ್ಷೆ ಬರೆಯುವುದಕ್ಕೆ ವಿದ್ಯಾರ್ಥಿಗಳು ಕನಿಷ್ಟ ಶೇ.75ರಷ್ಟು ಹಾಜರಾತಿ ಹೊಂದುವುದು ಕಡ್ಡಾಯ ಎನ್ನುವ ನಿಯಮವಿದೆ.

ಈ ವರ್ಷ ಕೊರೋನಾದಿಂದಾಗಿ ಶಾಲೆಗಳೇ ಸರಿಯಾಗಿ ನಡೆದಿಲ್ಲ. ಜನೆವರಿ 1ರಿಂದ  ಎಸ್ಎಸ್ಎಲ್ ಸಿ ತರಗತಿಗಳು ಆರಂಭವಾದರೂ ವಿದ್ಯಾರ್ಥಿಗಳು ಶಾಲೆಗೆ ಬರುವುದನ್ನು ಕಡ್ಡಾಯಗೊಳಿಸಿರಲಿಲ್ಲ.

ಹಾಗಾಗಿ ಈ ಬಾರಿ ಶೇ. 75ರಷ್ಟು ಹಾಜರಾತಿ ಕಡ್ಡಾಯ ಎನ್ನುವ ನಿಯಮ ಜಾರಿಗೊಳಿಸುವುದು ಸಾಧ್ಯವೇ ಇಲ್ಲ. ಹಾಗಾಗಿ ಪರೀಕ್ಷಾ ಶುಲ್ಕ ಪಾವತಿಸುವ ಎಲ್ಲ ವಿದ್ಯಾರ್ಥಿಗಳಿಗೆ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ಸರಕಾರ ಆದೇಶ ಹೊರಡಿಸಿದೆ.

ಪಾಲಕರು ಹಾಗೂ ಕೆಲವು ವಿದ್ಯಾರ್ಥಿಗಳಿಗಿದ್ದ ಸಂಶಯ ಈ ಮೂಲಕ ಪರಿಹಾರವಾಗಿದ್ದು, ಪರೀಕ್ಷಾ ಪಾವತಿ ಸಲ್ಲಿಸುವ ಎಲ್ಲ ವಿದ್ಯಾರ್ಥಿಗಳು ಪರೀಕ್ಷೆಯನ್ನ ಬರೆಯಬಹುದಾಗಿದೆ.


Spread the love

Leave a Reply

Your email address will not be published. Required fields are marked *

You may have missed