Karnataka Voice

Latest Kannada News

ತಾಯಿಯ ಸೀರೆಯಿಂದ ನೇಣಿಗೆ ಶರಣಾದ ಗರಗ ವಿದ್ಯಾರ್ಥಿ…!

ಧಾರವಾಡ: ಪರೀಕ್ಷೆ ಸಮೀಪಿಸುತ್ತಿದ್ದರಿಂದ ಆತಂಕಕ್ಕೆ ಒಳಗಾದ ವಿದ್ಯಾರ್ಥಿಯೋರ್ವ ತಾಯಿಯ ಸೀರೆಯಿಂದಲೇ ನೇಣಿಗೆ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ.

ಧಾರವಾಡ ತಾಲೂಕಿನ ಗರಗ ಗ್ರಾಮದ ಜಯಕೀರ್ತಿ ವಿದ್ಯಾಲಯದ ಮಹಾದೇವಪ್ಪ ನಾಗಪ್ಪ ದುಬ್ಬದಮರಡಿ ಎಂಬ ವಿದ್ಯಾರ್ಥಿಯೇ ಸೀರೆಯಿಂದ ನೇಣು ಹಾಕಿಕೊಂಡಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಶಾಲೆಗೆ ಹೋಗಿ ಬಂದ ಮಹಾದೇವಪ್ಪ ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಹತ್ತಿರ ಬರುತ್ತಿದ್ದ ಕಾರಣದಿಂದ ಆತಂಕಕ್ಕೆ ಒಳಗಾಗಿ ಹೀಗೆ ಮಾಡಿಕೊಂಡಿದ್ದಾನೆಂದು ಹೇಳಲಾಗಿದ್ದು, ಘಟನೆಯ ಬಗ್ಗೆ ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿದ್ಯಾರ್ಥಿಯ ಶವವನ್ನ ಧಾರವಾಡ ಶವಾಗಾರಕ್ಕೆ ರವಾನೆ ಮಾಡಿ, ಮುಂದಿನ ಕಾನೂನು ಕ್ರಮವನ್ನ ಜರುಗಿಸಲಾಗಿದೆ.

ಆನ್ ಲೈನ್ ಮೂಲಕ ತರಗತಿಗಳು ಮುಗಿದು ಈಗ ಶಾಲೆಗಳು ಆರಂಭವಾಗಿದ್ದು, ನಿರಂತರವಾಗಿ ಮಹಾದೇವಪ್ಪ ಶಾಲೆಗೆ ಹೋಗುತ್ತಿದ್ದ. ಆದರೆ, ಕೆಲವು ದಿನಗಳಿಂದ ಪರೀಕ್ಷೆಯ ಬಗ್ಗೆ ಆತಂಕಕ್ಕೆ ಒಳಗಾಗಿದ್ದ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *