Posts Slider

Karnataka Voice

Latest Kannada News

ರಾಜ್ಯ ಸರ್ಕಾರದ ವಿರುದ್ಧವೇ ಅಸಮಾಧಾನ ಹೊರಹಾಕಿದ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್

1 min read
Spread the love

ಬೆಂಗಳೂರು: ಹೊರ ರಾಜ್ಯದವರ ಆಗಮನಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಬೇಸರಗೊಂಡಿದ್ದಾರೆ. ಟ್ವಿಟರ್ ಮೂಲಕ ಅಸಮಾಧಾನ ಹೊರಹಾಕಿದ್ದಾರೆ ವೈದ್ಯಕೀಯ ಶಿಕ್ಷಣ ಸಚಿವರು. ಸೋಂಕು ವ್ಯಾಪಕವಾಗಿರುವ ಮಹಾರಾಷ್ಟ್ರದಿಂದ ಸುಮಾರು 250 ಜನರನ್ನು 6 ಬಸ್ಸುಗಳಲ್ಲಿ ಚಿಕ್ಕಬಳ್ಳಾಪುರಕ್ಕೆ ಕಳುಹಿಸಿರುವುದು ದುರಾದೃಷ್ಟಕರ. ದುಡುಕಿನ ನಿರ್ಧಾರ. ಕೊರೋನಾ ಸೋಂಕು ವ್ಯಾಪಕ ಮಹಾರಾಷ್ಟ್ರದಿಂದ ಹೆಚ್ಚಿನ ಜನರನ್ನ ಚಿಕ್ಕಬಳ್ಳಾಪುರಕ್ಕೆ‌ ಕಳಿಸುವ ಅಗತ್ಯವೆನಿತ್ತು ಎಂದು ಬೇಸರ ಹೊರಹಾಕಿದ್ದಾರೆ.

ಹೊರರಾಜ್ಯದ ಪ್ರಯಾಣಿಕರಿಂದ ಸೋಂಕಿತರ ಸಂಖ್ಯೆ ಹೆಚ್ಚಳವಾಗುವ ಭೀತಿ. ಸೋಂಕಿನ ಆತಂಕ ಹಾಗೂ ದುಗುಡದಿಂದ ನಿದ್ದೆ ಬರುತ್ತಿಲ್ಲ ಎಂದು ಸುಧಾಕರ್ ಟ್ವಿಟ್ ಮಾಡಿದ್ದಾರೆ. ಎಲ್ಲಾ ಜಿಲ್ಲಾಡಳಿತಗಳು ಎಚ್ಚರವಹಿಸುವಂತೆ ಸೂಚಿಸಿದ್ದಾರೆ.


Spread the love

Leave a Reply

Your email address will not be published. Required fields are marked *