Posts Slider

Karnataka Voice

Latest Kannada News

ಕಲಘಟಗಿ- ಕುಣಿಕೆಯಲ್ಲಿದ್ದವನ ಹಗ್ಗ ಕತ್ತರಿಸಿ “ಜೀವ” ಉಳಿಸಿದ ಪೊಲೀಸರು… Exclusive Video…

1 min read
Spread the love

ಕಲಘಟಗಿ: ಕುಡಿದ ಮತ್ತಿನಲ್ಲಿ ತನ್ನ ನಿವಾಸದಲ್ಲಿ ನೇಣಿಗೆ ಶರಣಾಗಲು ಕುಣಿಕೆಯಲ್ಲಿದ್ದ ವ್ಯಕ್ತಿಯನ್ನ ಸಮಯಕ್ಕೆ ಸರಿಯಾಗಿ ಬಂದು ರಕ್ಷಣೆ ಮಾಡಿದ ತೀರಾ ವಿರಳವಾದ ಘಟನೆಯೊಂದು ಕಲಘಟಗಿ ತಾಲೂಕಿನ ನೆಲ್ಲಿಹರವಿ ಗ್ರಾಮದಲ್ಲಿ ಸಂಭವಿಸಿದೆ.

ಮೊದಲು ಈ ವೀಡಿಯೋ ನೋಡಿ ಬಿಡಿ…

ಡಿಆರ್‌ನ ಸಂಗನಗೌಡ ಅವರು ಚಲಾಯಿಸುತ್ತಿದ್ದ 112ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗಣೇಶ ಹೆಂಬ್ಲಿ ಕೂಡಿಕೊಂಡು ನೆಲ್ಲಿಹರವಿ ಗ್ರಾಮದ 46 ವರ್ಷದ ಶಂಭುಲಿಂಗಯ್ಯ ಹುಲಸೋಗಿ ಎಂಬಾತನನ್ನ ರಕ್ಷಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಪೊಲೀಸರ ಈ ಕಾರ್ಯಕ್ಕೆ ಕಲಘಟಗಿ ಠಾಣೆ ಇನ್ಸಪೆಕ್ಟರ್ ಶ್ರೀಶೈಲ ಕೌಜಲಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಕ್ಷಣೆಗೊಳಗಾದ ಶಂಭುಲಿಂಗಯ್ಯ ಆಸ್ಪತ್ರೆಯಲ್ಲಿ ಚೇತರಿಸಿಕೊಂಡಿದ್ದಾರೆ.


Spread the love

Leave a Reply

Your email address will not be published. Required fields are marked *