ಹೆಬ್ಬಳ್ಳಿ ಸರಕಾರಿ ಆಸ್ಪತ್ರೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಹಿರಿಯ ಆರೋಗ್ಯ ಶುಶ್ರೂಷಕಿ…!

ಧಾರವಾಡ: ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿಯೇ ಹಿರಿಯ ಆರೋಗ್ಯ ಸುರಕ್ಷತಾ ಶುಶ್ರೂಷಕಿಯೋರ್ವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ.

ಹಿರಿಯ ಶುಶ್ರೂಷಕಿಯಾಗಿರುವ ಕಮಲಾ ನಾಗೇಶ್ವರರಾವ್ ಎಂಬುವವರೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಮುಂದಾಗಿದ್ದಾರೆ. ಇದನ್ನ ಗಮನಿಸಿದ ಸಿಬ್ಬಂದಿಗಳು, ಕಮಲಾ ಅವರನ್ನ ಬದುಕಿಸುವಲ್ಲಿ ಸಫಲರಾಗಿದ್ದಾರೆ.
ಘಟನೆಯ ನಂತರವೂ ಆಸ್ಪತ್ರೆಯಲ್ಲಿಯೇ ‘ನಾನು ಸಾಯಬೇಕು’ ಎಂದು ರೋಧಿಸುತ್ತಿರುವ ವೀಡಿಯೋಗಳು ಕೂಡಾ ವೈರಲ್ ಆಗಿದ್ದು, ಸಧ್ಯ ಆಸ್ಪತ್ರೆಗೆ ರವಾನೆ ಮಾಡಿ ಚಿಕಿತ್ಸೆ ಕೊಡಲಾಗುತ್ತಿದೆ.
ಘಟನೆಯ ಬಗ್ಗೆ ಪೊಲೀಸರು ಮಾಹಿತಿಯನ್ನ ಸಂಗ್ರಹಿಸಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡ ಮೇಲೆ ಮತ್ತಷ್ಟು ವಿವರವನ್ನ ಪಡೆಯಲಿದ್ದಾರೆ. ಘಟನೆಯಿಂದ ಸರಕಾರಿ ಆಸ್ಪತ್ರೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ಸೃಷ್ಠಿಯಾಗಿತ್ತು.